ಹುಬ್ಬಳ್ಳಿ-ಧಾರವಾಡ ಸುದ್ದಿ
ಹಿರಿಯ ಪತ್ರಕರ್ತ ಡಾ. ವಾಳ್ವೇಕರಗೆ ಕ.ವಿ.ವಿ ಯಿಂದ ಪಿಎಚ್‌ಡಿ ಪ್ರದಾನ

ಹಿರಿಯ ಪತ್ರಕರ್ತ ಡಾ. ವಾಳ್ವೇಕರಗೆ ಕ.ವಿ.ವಿ ಯಿಂದ ಪಿಎಚ್‌ಡಿ ಪ್ರದಾನ

ಧಾರವಾಡ: ಕಳೆದ ಎರಡು ದಶಕಗಳಿಂದ ವಿದ್ಯುನ್ಮಾನ, ಬಾನುಲಿ ಹಾಗೂ ಮುದ್ರಣ ಮಾಧ್ಯಮದಲ್ಲಿ ಪತ್ರಕರ್ತರಾಗಿ ಸೇವೆ ಸಲ್ಲಿಸುತ್ತಿರುವ ಹಿರಿಯ ಪತ್ರಕರ್ತ ಹಾಗೂ ಕರ್ನಾಟಕ ವಿಧಾನ ಪರಿಷತ್ತಿನ ಸಭಾಪತಿಯವರ ವಿಶೇಷ ಕರ್ತವ್ಯಾಧಿಕಾರಿ ಡಾ. ಮಹೇಶ ವಾಳ್ವೇಕರ ಅವರಿಗೆ ಧಾರವಾಡದ ಕರ್ನಾಟಕ ವಿಶ್ವವಿದ್ಯಾಲಯ ಪಿಎಚ್.ಡಿ ಪದವಿ ಪ್ರದಾನ ಮಾಡಿದೆ.


ಕವಿವಿ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗದ ನಿವೃತ್ತ ಪ್ರಾಧ್ಯಾಪಕ ಡಾ.ಎಂ.ಗಂಗಾಧರಪ್ಪ ಅವರ ಮಾರ್ಗದರ್ಶನದಲ್ಲಿ ಡಾ. ಮಹೇಶ ವಾಳ್ವೇಕರ ಅವರು “ಬಾನುಲಿಯಲ್ಲಿ ಆರೋಗ್ಯ ಕಾರ್ಯಕ್ರಮಗಳು ಧಾರವಾಡ ಆಕಾಶವಾಣಿ ಕೇಂದ್ರದ ಒಂದು ಅಧ್ಯಯನ” ಕುರಿತ ಸಂಶೋಧನೆ ಕೈಗೊಂಡು ಮಹಾಪ್ರಬಂಧವನ್ನು ವಿಶ್ವವಿದ್ಯಾಲಯಕ್ಕೆ ಮಂಡಿಸಿದ್ದರು.


ಧಾರವಾಡ ಅಕಾಶವಾಣಿ ಕೇಂದ್ರದ ಸುದ್ದಿ ವಿಭಾಗದ ವರದಿಗಾರರಾಗಿ, ವಾರ್ತಾ ವಾಚಕರಾಗಿ ಕರ್ತವ್ಯ ನಿರ್ವಹಿಸಿರುವ ವಾಳ್ವೇಕರ, ಉದಯ ಸುದ್ದಿ ವಾಹಿನಿ ಸೇರಿದಂತೆ ಹಲವು ವಿದ್ಯುನ್ಮಾನ ಸುದ್ದಿವಾಹಿನಿಯ ಜಿಲ್ಲಾ ವರದಿಗಾರರಾಗಿ ಹಾಗೂ ಮುದ್ರಣ ಮಾಧ್ಯಮದ ಹಲವು ಪತ್ರಿಕೆಗಳ ಜಿಲ್ಲಾ ವರದಿಗಾರರಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಾಧ್ಯಮದ ಎಲ್ಲ ಪ್ರಕಾರಗಳಲ್ಲೂ ಸಮರ್ಥವಾಗಿ, ಪ್ರಾಮಾಣಿಕ ವಾಗಿ ಹಾಗೂ ಕ್ರಿಯಾಶೀಲವಾಗಿ ಕರ್ತವ್ಯ ನಿರ್ವಹಿಸಿರುವ ಇವರು ಹಲವು ಸಂಘ ಸಂಸ್ಥೆಗಳಿಗೆ ಮಾಧ್ಯಮ ತಜ್ಞರಾಗಿ ಹಾಗೂ ಮಾಧ್ಯಮ ಸಲಹೆಗಾರರಾಗಿ ಕೆಲಸ ಮಾಡಿದ್ದಾರೆ.

administrator

Related Articles

Leave a Reply

Your email address will not be published. Required fields are marked *