ಹುಬ್ಬಳ್ಳಿ-ಧಾರವಾಡ ಸುದ್ದಿ

ಹುಬ್ಬಳ್ಳಿ ಬೆಳವಣಿಗೆಗೆ ಮಹೇಶ ಟೆಂಗಿನಕಾಯಿ ಗೆಲ್ಲಿಸಿ

ಹುಬ್ಬಳ್ಳಿ : ಹುಬ್ಬಳ್ಳಿ ಬೆಳವಣಿಗೆ ಕಾರ್ಯಕ್ರಮಗಳು ಮುಂದುವರೆಯಲು ಬಿಜೆಪಿಗೆ ಮತ ನೀಡುವ ಮೂಲಕ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಅವರನ್ನು ಗೆಲ್ಲಿಸಬೇಕು. ಅವರಿಗೆ ನೀಡಿದ ಮತವು ಪ್ರಧಾನಿ ಮೋದಿ ಅವರಿಗೂ ತಲುಪು ವುದು ಎಂದರು ಕೆಎಲ್‌ಈ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
ಲಿಂಗರಾಜ ನಗರದ ಸಮುದಾಯ ಭವನದಲ್ಲಿ ಹುಧಾ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಪರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿದರು.


ಕೇಂದ್ರ ಸಚಿವ ಪ್ರಹ್ಲಾದ ಜೋಶಿ ದೇಶ ಮೊದಲು ಎನ್ನುವ ಪಕ್ಷ ಬಿಜೆಪಿ ಯಾಗಿದ್ದು, ಪ್ರಧಾನಿ ಮೋದಿ ನಾಯಕತ್ವದಲ್ಲಿ ದೇಶಕ್ಕೆ ಹಿತವಾಗುವ ನೂರಾರು ನಿರ್ಣಯಗಳನ್ನು ಕೈಗೊಳ್ಳಲಾಗಿದ್ದು, ಟೆಂಗಿನಕಾಯಿಯವರನ್ನು ದೊಡ್ಡ ಅಂತರದಲ್ಲಿ ಗೆಲ್ಲಿಸಲು ಕರೆ ನೀಡಿದರು.


ಹುಬ್ಬಳ್ಳಿಯಲ್ಲಿ ಆಗಬೇಕಾಗಿದ್ದು ಕೈಗಾರಿಕೀಕರಣ, ಅದು ಬಿಜೆಪಿ ಸರ್ಕಾರ ಬಂದರೆ ಮಾತ್ರ ಸಾಧ್ಯ ಎಂದು ಮಾಜಿ ಲೋಕಸಭಾ ಸದಸ್ಯ ಡಾ.ವಿಜಯ ಸಂಕೇಶ್ವರ ಹೇಳಿದರು.
ಕೆಎಲ್‌ಇ ನಿರ್ದೇಶಕ ಶಂಕರಣ್ಣ ಮುನವಳ್ಳಿ, ಅಭ್ಯರ್ಥಿ ಮಹೇಶ ಟೆಂಗಿನಕಾಯಿ ಮಾತನಾಡಿದರು. ಪಾಲಿಕೆ ಸದಸ್ಯ ತಿಪ್ಪಣ್ಣ ಮಜ್ಜಗಿ, ಲಿಂಗರಾಜ ಪಾಟೀಲ, ಉಮೇಶ ಕೌಜಗೇರಿ, ಸಿಂದಗಿ, ರಾಜಣ್ಣ ಕೊರವಿ, ವಸಂತ ಹೊರಟ್ಟಿ, ಶಂಕರ ಪಾಟೀಲ ಉಪಸ್ಥಿತರಿದ್ದರು.

 

administrator

Related Articles

Leave a Reply

Your email address will not be published. Required fields are marked *