ಹುಬ್ಬಳ್ಳಿ-ಧಾರವಾಡ ಸುದ್ದಿ

ಕಾಂಗ್ರೆಸ್ ನಾಯಕಿ ಮನೆ ಮೇಲೆ ದಾಳಿ

ಚಿಂಚೋರೆ ಆಪ್ತರಿಗೆ ಶಾಕ್

ಹುಬ್ಬಳ್ಳಿ: ರಾಜ್ಯದ ಹಲವೆಡೆ ಐಟಿ ಅಧಿಕಾರಿಗಳ ದಾಳಿಯು ಕಾಂಗ್ರೆಸ್ ನಾಯಕರ ಮನೆಗಳ ಮೇಲೆ ಮುಂದುವರೆದಿದ್ದು ಇನ್ನೊಂದೆಡೆ  ಚುನಾವಣೆ ಅಧಿಕಾರಿಗಳು ತಮ್ಮ ದಾಳಿ ಮುಂದುವರೆಸಿದ್ದಾರೆ.

ಸೋಮವಾರ ತಡರಾತ್ರಿ ಕಾಂಗ್ರೆಸ್ ನಾಯಕಿ ದೇವಕಿ ಯೋಗಾನಂದ ಅವರ ಮನೆ ಮೇಲೆ 12 ಜನ ಚುನಾವಣಾಧಿಕಾರಿಗಳು ದಾಳಿ ಮಾಡಿ ಶೋಧ ನಡೆಸಿದ್ದಾರೆ.

ಹುಬ್ಬಳ್ಳಿಯ ಗಾಮನಗಟ್ಟಿಯಲ್ಲಿರುವ ಕಾಂಗ್ರೆಸ್ ನಾಯಕಿ ದೇವಕಿಯವರ  ನಿವಾಸದಲ್ಲಿ ಮೂರು ಗಂಟೆಗಳ ತಪಾಸಣೆ ನಡೆಸಿದ ಚುನಾವಣಾ ಅಧಿಕಾರಿಗಳು, ಏನು ಸಿಗದೆ ಬರಿಗೈಲ್ಲಿ ವಾಪಾಸ್ ಹೋಗಿದ್ದಾರೆ. ಜಿಲ್ಲಾ ಮಹಿಳಾ  ಕಾಂಗ್ರೆಸ್ ಮಾಜಿ ಅಧ್ಯಕ್ಷೆ ದೇವಕಿ ಅವರು ಪಶ್ಚಿಮ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದೀಪಕ್ ಚಿಂಚೋರೆಯ ಆಪ್ತರಾಗಿರುವ ಹಿನ್ನೆಲೆಯಲ್ಲಿ ಈ ದಾಳಿ ನಡೆದಿದೆ.

ಅಲ್ಲದೇ ನಿನ್ನೆ ಚಿಂಚೋರೆ ಅವರ ಇನ್ನೋರ್ವ ಆಪ್ತ ರಾಬರ್ಟ್ ದದ್ದಾಪುರಿ ಮನೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದರು.

ಧಾರವಾಡದ ವಿವೇಕಾನಂದ ನಗರದಲ್ಲಿರುವ ರಾಬರ್ಟ್ ದದ್ದಾಪುರಿ ಅವರ ಮನೆಗೆ ಬಂದ 6 ಜನ ಐಟಿ ಅಧಿಕಾರಿಗಳ ತಂಡ ವಿವಿಧ ದಾಖಲೆ ಪತ್ರಗಳನ್ನು ಪರಿಶೀಲನೆ ನಡೆಸಿದ್ದಾರೆ.

 

administrator

Related Articles

Leave a Reply

Your email address will not be published. Required fields are marked *