ಹುಬ್ಬಳ್ಳಿ-ಧಾರವಾಡ ಸುದ್ದಿ

ಸ್ವಾಭಿಮಾನದೆದುರು ಸಿದ್ಧಾಂತಕ್ಕೆ ಜಯ

ಶೆಟ್ಟರ್ ವಿರುದ್ಧ ಗೆಲುವಿನ ನಗೆ ಬೀರಿದ ಮಹೇಶ

ಹುಬ್ಬಳ್ಳಿ: ಇಡೀ ರಾಷ್ಟ್ರವೇ ತದೇಕ ಚಿತ್ತದಿಂದ ನೋಡುತ್ತಿದ್ದ ಹುಬ್ಬಳ್ಳಿ ಧಾರವಾಡ ಕ್ಷೇತ್ರದಲ್ಲಿ ಸಿದ್ಧಾಂತದ ಎದುರು ಸ್ವಾಭಿಮಾನಕ್ಕೆ ಸೋಲಾಗಿದೆ. ಇಡೀ ರಾಜ್ಯದಲ್ಲಿಯೇ ಕೈ ಕಹಳೆ ಮೊಳಗುತ್ತಿದ್ದರೂ ಸೆಂಟ್ರಲ್‌ನಲ್ಲಿ ಕಮಲ ಅರಳಿದೆ.
ಬಿಜೆಪಿ ಹೈಕಮಾಂಡ್ ಅಲ್ಲದೇ ವಿಶೇಷವಾಗಿ ಬಿ.ಎಲ್.ಸಂತೋಷ ಹಾಗೂ ಪ್ರಹ್ಲಾದ ಜೋಶಿ ಮತ್ತು ಜಗದೀಶ ಶೆಟ್ಟರ್ ನಡುವಣ ಕದನ ಎಂದೇ ಬಿಂಬಿತವಾದ ಕದನದಲ್ಲಿ ಬಿಜೆಪಿ ಅಭ್ಯರ್ಥಿ ಜಯಗಳಿಸಿದರು.


ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದ ಗೆಲುವು ಬಿಜೆಪಿ ಕಾರ್ಯಕರ್ತರ ಗೆಲುವಾಗಿದೆ. ಬಿಜೆಪಿ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ಮತದಾರರು ಬಿಜೆಪಿಯ ಒಬ್ಬ ಸಾಮಾನ್ಯ ಕಾರ್ಯಕರ್ತನನ್ನು ಗೆಲ್ಲಿಸಿದ್ದಾರೆ. ಹೀಗಾಗಿ ಇದು ನನ್ನ ಗೆಲುವಲ್ಲ ಪಕ್ಷದ ಕಾರ್ಯಕರ್ತರ ಗೆಲುವು ಎಂದು ಗೆಲುವಿನ ನಂತರ ಮಹೇಶ ಟೆಂಗಿನಕಾಯಿ ಹೇಳಿದರು.


ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸುಮಾರು 35 ಸಾವಿರಕ್ಕಿಂತ ಹೆಚ್ಚಿನ ಮತಗಳ ಅಂತರದ ಗೆಲುವು ನಿರೀಕ್ಷೆ ಮಾಡಿದ್ದೆವು. ನಿರೀಕ್ಷೆಯಂತೆಯೇ ಮತದಾರರು ಬೆಂಬಲಿಸಿದ್ದಾರೆ. ವ್ಯಕ್ತಿ ಮುಖ್ಯ ಅಲ್ಲ, ಬಿಜೆಪಿ ಪಕ್ಷ, ಕಾರ್ಯಕರ್ತರು ಮುಖ್ಯ ಎಂಬುದು ಸಾಬೀತಾಗಿದೆ. ಭವಿಷ್ಯದಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಟಿಕೆಟ್ ಕೊಟ್ಟರೆ ಯಾವ ರೀತಿ ಗೆಲುವು ಲಭಿಸುತ್ತದೆ ಎಂಬುದಕ್ಕೆ ಉದಾಹರಣೆಯಾಗಿ ಈ ಫಲಿತಾಂಶ ಬಂದಿದೆ ಎಂದರು.

ಸೆಂಟ್ರಲ್ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಹಲವು ಕನಸುಗಳಿವೆ. ಮಾದರಿ ಕ್ಷೇತ್ರವಾಗಿ ಅಭಿವೃದ್ಧಿಪಡಿಸುತ್ತೇನೆ. ಜನರ ನಿರೀಕ್ಷೆ ಹುಸಿಗೊಳಿಸುವುದಿಲ್ಲ ಎಂದು ಮಹೇಶ ಟೆಂಗಿನಕಾಯಿ ಹೇಳಿದರು.

administrator

Related Articles

Leave a Reply

Your email address will not be published. Required fields are marked *