ಹುಬ್ಬಳ್ಳಿ-ಧಾರವಾಡ ಸುದ್ದಿ

ಕಾರ್ಮಿಕ ಕಲ್ಯಾಣ ನಿಧಿ ದುರ್ಬಳಕೆ : ಪರಿಶೀಲಿಸಿ ಕ್ರಮ

ಸಚಿವ ಲಾಡ್‌ಗೆ ನಗರದಲ್ಲಿ ಅದ್ದೂರಿ ಸ್ವಾಗತ

ಹುಬ್ಬಳ್ಳಿ : ಕಾರ್ಮಿಕ ಕಲ್ಯಾಣ ನಿಧಿಯನ್ನು ಬಿಜೆಪಿ ದುರ್ಬಳಕೆ ಮಾಡಿರುವ ವಿಚಾರಕ್ಕೆ ಸಂಬಂದಿಸಿದಂತೆ ಪರಿಶೀಲಿಸಿ ಕ್ರಮ ಕೈಗೊಳ್ಳುವುದಾಗಿ ನೂತನ ಕಾರ್ಮಿಕ ಸಚಿವ ಸಂತೋಷ ಲಾಡ್ ಹೇಳಿದರು.


ಸಚಿವರಾದ ನಂತರ ಮೊದಲ ಬಾರಿಗೆ ಕಲಘಟಗಿ ಕ್ಷೇತ್ರಕ್ಕೆ ತೆರಳಲು ಆಗಮಿಸಿದ ಅವರು ಮಾಧ್ಯಮದವರೊಂದಿಗೆ ಚುಟುಕಾಗಿ ಮಾತನಾಡಿ ಕಾರ್ಯ ಭಾರ ಸ್ವೀಕರಿಸಿ ಎರಡು ದಿನಗಳಾಗಿದ್ದು ಮುಂದಿನ ದಿನಗಳಲ್ಲಿ ಈ ಬಗ್ಗೆ ಸವಿಸ್ತಾರವಾಗಿ ಪರಾಮರ್ಶಿಸಿ ಕ್ರಮ ಕೈಗೊಳ್ಳಲಾಗುವುದೆಂದರು.


ಗ್ಯಾರಂಟಿ ಬಗ್ಗೆ ಕೇಳಿದಾಗ ಗುರುವಾರ ಸಂಪುಟ ಸಭೆಯಲ್ಲಿ ಚರ್ಚೆ ಆಗಲಿದ್ದು ೨-೩ದಿನಗಳಲ್ಲಿ ಸಿಹಿ ಸುದ್ದಿ ಸಿಗಲಿದೆ. ಕ್ಷೇತ್ರದ ಜನತೆಗೆ ಗೌರವ ಮತ್ತು ಅಭಿನಂದನೆ ಸಲ್ಲಿಸಲು ಬಂದಿದ್ದೇನೆ, ಹಿಂದೆ ನಾನು ಕಾರ್ಮಿಕ ಸಚಿವನಾಗಿದ್ದಾಗ ಕಡಿಮೆ ಸಮಯ ಸಿಕ್ಕಿತ್ತು. ಈಗ ಮತ್ತೆ ಅದೆ ಖಾತೆ ಸಿಕ್ಕಿದೆ. ಹೆಚ್ಚಿನ ಕೆಲಸ ಮಾಡುವ ಗುರಿಯಿದೆ ಎಂದರು.

https://youtube.com/shorts/n8C3vXUIzwM

ವಿಮಾನ ನಿಲ್ದಾಣದಲ್ಲಿ ಕ್ಷೇತ್ರದ ಪ್ರಮುಖರು, ಜಿಲ್ಲೆಯ ಕಾಂಗ್ರೆಸ್ ಮುಖಂಡರು ಅದ್ಧೂರಿಯಾಗಿ ಸ್ವಾಗತಿಸಿದರು.

administrator

Related Articles

Leave a Reply

Your email address will not be published. Required fields are marked *