ಹುಬ್ಬಳ್ಳಿ-ಧಾರವಾಡ ಸುದ್ದಿ

ಕಾರಿಗೆ ಲಾರಿ ಡಿಕ್ಕಿ: ಮೂವರ ಸಾವು

ಕಿಲ್ಲರ್ ಬೈಪಾಸ್‌ನಲ್ಲಿ ಭೀಕರ ಅಪಘಾತ

ಧಾರವಾಡ: ಧಾರವಾಡದ ಕಿಲ್ಲರ್ ಬೈಪಾಸ್ ಬಳಿ ಇಂದು ಬೆಳಗಿನ ಜಾವ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು ಮತ್ತೋರ್ವನ ಸ್ಥಿತಿ ಚಿಂತಾಜನಕವಾಗಿದೆ.


ಹಳಿಯಾಳ ಸೇತುವೆ ಬಳಿ ಕ್ಯಾರಕೊಪ್ಪದ ಹತ್ತಿರ ಈ ದುರಂತ ಸಂಭವಿಸಿದ್ದು, ವೇಗವಾಗಿ ಹೋಗುತ್ತಿದ್ದ ಕಾರಿಗೆ ಲಾರಿಯೊಂದು ಡಿಕ್ಕಿ ಹೊಡೆದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಇನ್ನೋರ್ವ ಧಾರವಾಡ ಜಿಲ್ಲಾ ಆಸ್ಪತ್ರೆಯಲ್ಲಿ ಅಸು ನೀಗಿದ್ದಾನೆ. ಬೆಳಗಾವಿ ಕಡೆಯಿಂದ ಅರಸಿಕರೆ ಚನ್ನರಾಯಪಟ್ಟಣ ಕಡೆ ಹೋಗುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು ಕಾರು ಸಂಪೂರ್ಣ ಜಖಂಗೊಂಡಿದ್ದು ಎಲ್ಲರೂ ಅದರಲ್ಲಿದ್ದವರೆಲ್ಲಾ ಚೆನ್ನರಾಯಪಟ್ಟಣ ಮೂಲದವರಾಗಿದ್ದಾರೆನ್ನಲಾಗಿದೆ.


ಮೃತರನ್ನು ಕೆ.ಆರ್.ನಗರದ ಪುಟ್ಟೇಗೌಡ(33), ಹೊಳೆನರಸಿಪುರದ ದೀಪಕ( 26) ಹಾಗೂ ಹೊಳೆನರಸಿಪುರದ ಚಂದನಗೌಡ (22 ಎನ್ನಲಾಗಿದೆ. ಗಾಯಗೊಂಡ ಮತ್ತೊಬ್ಬನನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ ಧಾರವಾಡ ಗ್ರಾಮೀಣ ಠಾಣೆಯ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದ್ದು ಮಾಹಿತಿ ಕಲೆ ಹಾಕಲಾಗುತ್ತಿದೆ.

 

administrator

Related Articles

Leave a Reply

Your email address will not be published. Required fields are marked *