ಹುಬ್ಬಳ್ಳಿ-ಧಾರವಾಡ ಸುದ್ದಿ

ಗುಣಧರ ನಂದಿ ಮಹಾರಾಜರ ಉಪವಾಸ ಕೈಬಿಡಲು ಜಿಲ್ಲಾಡಳಿತ ಮನವಿ

ಹುಬ್ಬಳ್ಳಿ: ಚಿಕ್ಕೋಡಿಯ ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಹತ್ಯೆ ಖಂಡಿಸಿ ಜೈನಮುನಿಗಳಿಗೆ, ಜೈನ ಬಸದಿಗಳಿಗೆ ರಕ್ಷಣೆ ಒದಗಿಸುವವರೆಗೆ ಸಲ್ಲೇಖನ ವೃತ(ಆಮರಣ ಉಪವಾಸ) ಕೈಗೊಂಡಿರುವ ವರೂರಿನ ನವಗ್ರಹ ತೀರ್ಥ ಕ್ಷೇತ್ರದ 108 ಆಚಾರ್ಯ ಗುಣಧರ ನಂದಿ ಮಹಾರಾಜರು ಅವರಿಗೆ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಮನವಿ ಮಾಡಿದರು.


ಇಲ್ಲಿನ ವರೂರಿನ ನವಗ್ರಹ ತೀರ್ಥ ಕ್ಷೇತ್ರಕ್ಕೆ ಇಂದು ತೆರಳಿ 108 ಆಚಾರ್ಯ ಗುಣಧರ ನಂದಿ ಮಹಾರಾಜರನ್ನು ಭೇಟಿ ಮಾಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಅವರು ಕೆಲಹೊತ್ತು ಮಾತುಕತೆ ನಡೆಸಿ ಆಮರಣ ಉಪವಾಸ ಹಿಂಪಡೆಯಲು ಮನವಿ ಮಾಡಿದರು.


ಈ ಸಂದರ್ಭದಲ್ಲಿ ಎಸ್‌ಪಿ ಲೋಕೇಶ ಜಗಲಸಾರ, ಕುಂದಗೋಳ ಕ್ಷೇತ್ರದ ಶಾಸಕ ಎಂ.ಆರ್. ಪಾಟೀಲ, ಜೈನ್ ಸಮಾಜದ ಹಿರಿಯರಾದ ಮಹೇಂದ್ರ ಸಿಂಘಿ, ವಿಮಲ ತಾಳಿಕೋಟಿ, ಅನೀಲಕುಮಾರ ಪಾಟೀಲ ಸೇರಿದಂತೆ ಇನ್ನಿತರರಿದ್ದರು.ಇನ್ನು ಇಂದು ಸಂಜೆ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ವರೂರಿನ ನವಗ್ರಹ ತೀರ್ಥ ಕ್ಷೇತ್ರಕ್ಕೆ ಭೇಟಿ ನೀಡಿ ಶ್ರೀಗಳ ಜೊತೆ ಮಾತನಾಡ ಲಿದ್ದಾರೆ.

administrator

Related Articles

Leave a Reply

Your email address will not be published. Required fields are marked *