ಹುಬ್ಬಳ್ಳಿ-ಧಾರವಾಡ ಸುದ್ದಿ
ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಶೆಣೈ

ಮಾಧ್ಯಮ ಅಕಾಡೆಮಿ ಅಧ್ಯಕ್ಷರಾಗಿ ಶೆಣೈ

ಬೆಂಗಳೂರು: ಕರ್ನಾಟಕ ಮಾಧ್ಯಮ ಅಕಾಡಮಿಗೆ ಅಧ್ಯಕ್ಷರು/ ಸದಸ್ಯರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಸರ್ಕಾರದ ಮುಂದಿನ ಆದೇಶದ ವರೆಗೆ ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಕರ್ನಾಟಕ ಮಾಧ್ಯಮ ಅಕಾಡೆಮಿಯ ನಿಯಮಾವಳಿ(೫) ರ ನಿಯಮ ೫.೧ ರ ಪ್ರಕಾರ ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರನ್ನಾಗಿ ಹಿರಿಯ ಪತ್ರಕರ್ತ ಕೆ. ಸದಾಶಿವ ಶೆಣೈ ಅವರನ್ನು ನೇಮಕ ಮಾಡಲಾಗಿದ್ದು, ಗೋಪಾಲ ಸಿಂಗಪ್ಪಯ್ಯ ಯಡಗೆರೆ, ಕೆ.ಕೆ. ಮೂರ್ತಿ, ಶಿವಕುಮಾರ್ ಬೆಳ್ಳಿತಟ್ಟೆ, ಕೂಡ್ಲಿ ಗುರುರಾಜ್ ನೇಮಕಗೊಂಡಿದ್ದಾರೆ.
ಅಲ್ಲದೇ ನಿಯಮಾವಳಿ(೫) ರ ನಿಯಮ ೫.೧ ರ(೨) ಪ್ರಕಾರ ಕೆಯುಡಬ್ಲುಜೆ ಅಧ್ಯಕ್ಷ ಶಿವಾನಂದ ತಗಡೂರ, ಸಿ.ಕೆ. ಮಹೇಂದರ್, ಜಗನ್ನಾಥ ಬಾಳ, ದೇವೇಂದ್ರಪ್ಪ ಕಪನೂರು, ಕೆ.ವಿ. ಶಿವಕುಮಾರ್ ಅವರನ್ನು ಇತರ ಸದಸ್ಯರನ್ನಾಗಿ ನೇಮಕ ಮಾಡಲಾಗಿದೆ.

administrator

Related Articles

Leave a Reply

Your email address will not be published. Required fields are marked *