ಹುಬ್ಬಳ್ಳಿ-ಧಾರವಾಡ ಸುದ್ದಿ
ರೆವಿನ್ಯೂ ಇನ್ಸ್‌ಪೆಕ್ಟರ್‌ ಚೈತ್ರಾ ಆತ್ಮಹತ್ಯೆ

ರೆವಿನ್ಯೂ ಇನ್ಸ್‌ಪೆಕ್ಟರ್‌ ಚೈತ್ರಾ ಆತ್ಮಹತ್ಯೆ

ಕೊಪ್ಪಳ: ಕೊಪ್ಪಳ ನಗರಸಭೆಯ ಕಂದಾಯ ನಿರಿಕ್ಷಕಿಯಾಗಿದ್ದ ಶ್ರೀಮತಿ ಚೈತ್ರಾ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಆತ್ಮಹತ್ಯೆ ಮಾಡಿಕೊಂಡಿರುವ ಚೈತ್ರಾ.

ರಾಯಚೂರು ಜಿಲ್ಲೆ ಸಿರುಗುಪ್ಪದ ತಮ್ಮ ಸ್ವಗೃಹದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವುದು ಪತ್ತೆಯಾಗಿದೆ. ಕೇವಲ 25 ವಯಸ್ಸಿನ ಅವರು ಇತ್ತೀಚೆಗಷ್ಟೇ ಕೆಲಸಕ್ಕೆ ಸೇರಿದ್ದರು.

ಕೆಲ ದಿನಗಳ ಹಿಂದಷ್ಟೇ ಅವರು ದಂತವೈದ್ಯರೊಬ್ಬರನ್ನು ಮದುವೆಯಾಗಿದ್ದರು. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.

ಚೈತ್ರಾ ಆತ್ಮಹತ್ಯೆ ಸುದ್ದಿ ತಿಳಿಯುತ್ತಲೇ ಕೊಪ್ಪಳ ನಗರಸಭೆ ಸಿಬ್ಬಂದಿ ದಿಗ್ಭ್ರಮೆಗೊಂಡರು. ನಿಖರ ಕಾರಣ ಗೊತ್ತಿಲ್ಲದ ಹಿನ್ನೆಲೆಯಲ್ಲಿ, ಹಲವಾರು ಊಹಾಪೋಹಗಳು ಸಾಮಾಜಿಕ ಜಾಲತಾಣದಲ್ಲಿ ಕಾಣಿಸಿಕೊಂಡಿವೆ.

administrator

Related Articles

Leave a Reply

Your email address will not be published. Required fields are marked *