ಹುಬ್ಬಳ್ಳಿ-ಧಾರವಾಡ ಸುದ್ದಿ

ಪಾಲಿಕೆ ಆವರಣದಲ್ಲಿ ಕಾಂಗ್ರೆಸ್‌ನಿಂದ ಭಜನೆ

ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆ ನಡೆದು 6 ತಿಂಗಳು ಕಳೆದರೂ ಆಯ್ಕೆಯಾದ ನೂತನ ಸದಸ್ಯರಿಗೆ ಅಧಿಕಾರ ನೀಡದಿರುವ ಸರ್ಕಾರದ ಕ್ರಮ ಖಂಡಿಸಿ ಪಾಲಿಕೆ ಆವರಣದಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಭಜನೆ ಮಾಡುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಲಾಯಿತು.
ಸರ್ಕಾರ ನಮಗೆ ಇದುವರೆಗೆ ಅಧಿಕಾರ ನೀಡಿಲ್ಲ. ಮಹಾನಗರದ ಸಮಸ್ಯೆ ಆಲಿಸಲು ಆಗುತ್ತಿಲ್ಲ. ಸರ್ಕಾರದ ವಿರುದ್ಧ ಧ್ವನಿ ಎತ್ತಲು ಈ ಪ್ರತಿಭಟನೆ ಹಮ್ಮಿಕೊಂಡಿರುವುದಾಗಿ ಮಹಾನಗರ ಜಿಲ್ಲಾ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಪ್ರಕಾಶ ಬುರಬುರೆ ಬಿಜೆಪಿ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ, ಮಹೇಂದ್ರ ಸಿಂಘಿ ಸೇರಿದಂತೆ ಅನೇಕ ಕಾರ್ಯಕರ್ತರು ಇದ್ದರು.

administrator

Related Articles

Leave a Reply

Your email address will not be published. Required fields are marked *