ಹುಬ್ಬಳ್ಳಿ-ಧಾರವಾಡ ಸುದ್ದಿ

ಧಾರವಾಡ: ಮೂವರು ಬೆಟ್ಟಿಂಗ ಕುಳಗಳ ಬಂಧನ

ಧಾರವಾಡ: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಮೂವರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.


ಇಲ್ಲಿನ ಕೆಲಗೇರಿ ಬಳಿಯ ಆಂಜನೇಯ ನಗರದಲ್ಲಿ ನಿನ್ನೆ ರಾತ್ರಿ ಐಪಿಎಲ್ ಕ್ರಿಕೆಟ್ ಆಟ ನಡೆಯುತ್ತಿದ್ದ ಸಂದರ್ಭದಲ್ಲಿ ಮೊಬೈಲ್‌ನಲ್ಲಿ ಬೆಟ್ಟಿಂಗ್ ನಡೆಸುತ್ರಿದ್ದ ಆಂಜನೇಯ ನಗರದ ಬಸವರಾಜ ಧರಿಯಪ್ಪ ಬಳ್ಳೊಳ್ಳಿ ಮತ್ತು ಕಾರ್ತಿಕ ಪರಶುರಾಮ ಗೊಡ್ಡೆಮ್ಮಿ ಎಂಬುವರನ್ನು ಸಿಸಿಬಿ ಇನ್ಸಪೆಕ್ಟರ್ ಎಚ್.ಎಂ.ಪಾಟೀಲ ಮತ್ತು ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಬಸವರಾಜ ವಾಲೀಕಾರ ಮತ್ತು ರವಿ ವಾಲೀಕಾರ ಎಂಬುವರು ಪರಾರಿಯಾಗಿದ್ದಾರೆ. ಬಂಧಿತರಿಂದ 2020 ರೂಪಾಯಿ ನಗದು ಮತ್ತು 2 ಮೊಬೈಲ್ ಇನ್ನಿತರ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.
ಕಳೆದ ಶನಿವಾರ ರಾತ್ರಿ ಗುಜರಾತ್ ಟೈಟನ್ಸ್ ಮತ್ರು ಡೆಲ್ಲಿ ಕ್ಯಾಪಿಟಲ್ಸ್ ತಂಡಗಳ ಮಧ್ಯೆ ಆಟ ನಡೆಯುತ್ತಿದ್ದಾಗ ಶಹರ ಠಾಣಾ ವ್ಯಾಪ್ತಿಯ ಚರಂತಿಮಠ ಗಾರ್ಡನ್ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಂತು ಬೆಟ್ಡಿಂಗ್ ನಡೆಸಲಾಗುತ್ತಿತ್ತು. ಈ ಸಂದರ್ಭದಲ್ಲಿ ಸಿಸಿಬಿ ಇನ್ಸಪೆಕ್ಟರ್ ವಿ.ಎಸ್.ಚೌಗುಲೆ ಹಾಗೂ ಸಿಬ್ಬಂದಿ ದಾಳಿ ನಡೆಸಿ, ಸೊಲ್ಲಾಪುರ ಮೂಲದ ತಸ್ಲೀಂ ಅರೀಫ್ ಮಹ್ಮದಇಸಾಕ ನಾಯಕ ಎಂಬಾತನನ್ನು ಬಂಧಿಸಿದ್ದಾರೆ. ಆರೋಪಿತನಿಂದ 12 ಸಾವಿರ ರೂಪಾಯಿ ನಗದು ಮತ್ತಿತರರ ಸಾಮಗ್ರಿಗಳನ್ನು ವಶಪಡಿಸಿ ಕೊಳ್ಳಲಾಗಿದೆ.

administrator

Related Articles

Leave a Reply

Your email address will not be published. Required fields are marked *