ಹುಬ್ಬಳ್ಳಿ-ಧಾರವಾಡ ಸುದ್ದಿ
ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷಗಿರಿ: ಛಬ್ಬಿಗೆ ಮಣೆ?

ಗ್ರಾಮೀಣ ಕಾಂಗ್ರೆಸ್ ಅಧ್ಯಕ್ಷಗಿರಿ: ಛಬ್ಬಿಗೆ ಮಣೆ?

ವಾರದೊಳಗೆ ಪ್ರಕಟ ಸಾಧ್ಯತೆ

ಹುಬ್ಬಳ್ಳಿ: ಈಗಾಗಲೇ ಜಂಬೋ ಪದಾಧಿಕಾರಿಗಳ ಪಟ್ಟಿ ಬಿಡುಗಡೆ ಮಾಡಿರುವ ಕಾಂಗ್ರೆಸ್ ಪಕ್ಷ, ಇಷ್ಟರಲ್ಲೇ ರಾಜ್ಯ ಕಾರ್ಯದರ್ಶಿಗಳ ಪಟ್ಟಿ ಅಲ್ಲದೇ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರನ್ನು ನೇಮಕ ಮಾಡಲಿದ್ದು, ಧಾರವಾಡ ಗ್ರಾಮೀಣ ಅಧ್ಯಕ್ಷರಾಗಿ ಮಾಜಿ ಪರಿಷತ್ ಸದಸ್ಯ ನಾಗರಾಜ ಛಬ್ಬಿ ನೇಮಕ ಬಹುತೇಕ ಖಚಿತ ಎನ್ನಲಾಗಿದೆ.

NAGARAJ-CHEBBI

ಹಾಲಿ ಗ್ರಾಮೀಣ ಅಧ್ಯಕ್ಷ ಅನಿಲಕುಮಾರ ಪಾಟೀಲ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನಿಯುಕ್ತಿಗೊಂಡಿರುವ ಹಿನ್ನೆಲೆಯಲ್ಲಿ ಎಲ್ಲ ಮುಖಂಡರನ್ನು ಒಟ್ಟಿಗೆ ಕರೆದೊಯ್ಯುವ ಸಾಮರ್ಥ್ಯವಿರುವ ಛಬ್ಬಿ ಅವರಿಗೆ ಅಧ್ಯಕ್ಷ ಸ್ಥಾನ ನೀಡಬೇಕೆಂಬುದು ಪಕ್ಷದ ವರಿಷ್ಠರ ಅಭಿಪ್ರಾಯವಾಗಿದೆ.
ಕಲಘಟಗಿ ಕ್ಷೇತ್ರದ ಪ್ರಭಲ ಆಕಾಂಕ್ಷಿಯಾಗಿ ಈಗಾಗಲೇ ಕ್ಷೇತ್ರದಾದ್ಯಂತ ಸಕ್ರೀಯರಾಗಿರುವ ಛಬ್ಬಿಯವರು ಪಕ್ಷದ ಜಿಲ್ಲಾ ಜವಾಬ್ದಾರಿ ಹೊರಲು ಸ್ವಲ್ಪ ಹಿಂದೇಟು ಹಾಕುತ್ತಿದ್ದರೂ ಅವರನ್ನೇ ಒಪ್ಪಿಸುವ ಸಾಧ್ಯತೆಗಳಿದ್ದು, ಇನ್ನೊಂದು ವಾರದೊಳಗೆ ಅಧಿಕೃತ ಘೋಷಣೆ ಸಾಧ್ಯತೆಗಳಿವೆ ಎನ್ನಲಾಗಿದೆ.
ಮಾಜಿ ಸಚಿವ ಕೆ.ಎನ್.ಗಡ್ಡಿ, ಕುಂದಗೋಳ ಬ್ಲಾಕ್ ಅಧ್ಯಕ್ಷ ಜಗದೀಶ ಉಪ್ಪಿನ, ಜಿಲ್ಲಾ ಕಿಸಾನ್ ಕಾಂಗ್ರೆಸ್ ಅಧ್ಯಕ್ಷ ಮುತ್ತಣ್ಣ ಶಿವಳ್ಳಿ, ಕೆಪಿಸಿಸಿ ಮಾಜಿ ಕಾರ್ಯದರ್ಶಿ ರಾಜಶೇಖರ ಮೆಣಸಿನಕಾಯಿ ಮುಂತಾದವರ ಹೆಸರುಗಳು ಅಧ್ಯಕ್ಷ ಗಾದಿಗೆ ಕೇಳಿ ಬಂದಿವೆಯಾದರೂ ೨೦೦೮ರಲ್ಲಿ ಜಿಲ್ಲಾ ಅಧ್ಯಕ್ಷರಾಗಿ ಸಮರ್ಥವಾಗಿ ನಿಭಾಯಿಸಿರುವ ಛಬ್ಬಿಯವರಿಗೆ ಪಟ್ಟ ಕಟ್ಟಲು ಮುಂದಾಗಿದ್ದಾರೆನ್ನಲಾಗಿದೆ.

administrator

Related Articles

Leave a Reply

Your email address will not be published. Required fields are marked *