ಅಧ್ಯಕ್ಷರಾಗಿ ಸುಧಾಕರ ಶೆಟ್ಟಿ ಆಯ್ಕೆ
ಹುಬ್ಬಳ್ಳಿ : ಹೊಟೆಲ್ ಉದ್ಯಮಿ, ಸಮಾಜ ಸೇವಕ ಸುಗ್ಗಿ ಸುಧಾಕರ ಶೆಟ್ಟಿಯವರು ಹುಬ್ಬಳ್ಳಿ ಧಾರವಾಡ ಬಂಟರ ಸಂಘದ ನೂತನ ಅಧ್ಯಕ್ಷರಾಗಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ.
ಇಲ್ಲಿನ ಆರ್.ಎನ್.ಶೆಟ್ಟಿ ಕಲ್ಯಾಣ ಮಂಟಪದಲ್ಲಿ ಇತ್ತೀಚೆಗೆ ನಡೆದ ಸಂಘದ ಪದಾಧಿಕಾರಿಗಳು, ಸದಸ್ಯರ ಸಭೆಯಲ್ಲಿ ಇದುವರೆಗೆ ಉಪಾಧ್ಯಕ್ಷರಾಗಿದ್ದ ಸುಧಾಕರ ಶೆಟ್ಟಿಯವರನ್ನು ಸಂಘದ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.
ಕಳೆದ ಮೂರು ದಶಕಗಳಿಂದ ಸಂಘದ ಸದಸ್ಯರಾಗಿ ಹಾಗೂ ಪದಾಧಿಕಾರಿ ಯಾಗಿ ಜವಾಬ್ದಾರಿ ನಿರ್ವಹಿಸಿರುವ ಶೆಟ್ಟಿಯವರು ಸದ್ದಿಲ್ಲದೇ ಸಮಾಜ ಸೇವೆಯಲ್ಲಿ, ಅವಳಿನಗರದಲ್ಲಿ ವಿವಿಧ ಸೇವಾ ಕಾರ್ಯಗಳಲ್ಲಿ ಸಕ್ರೀಯರಾಗಿ ತೊಡಗಿಸಿಕೊಂಡಿದ್ದಾರೆ.
ತಮ್ಮ ಸ್ವಗ್ರಾಮ ಉಡುಪಿ ಜಿಲ್ಲೆಯ ಕರ್ಜೆಯಲ್ಲಿ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಪಡಿಸಿ ಹೆಸರು ಮಾಡಿದ್ದಾರೆ.
ತಮ್ಮ ಆಯ್ಕೆ ಮಾಡಿದ ಎಲ್ಲ ಸದಸ್ಯರಿಗೆ ಕೃತಜ್ಞತೆ ಸಲ್ಲಿಸಿರುವ ಅವರು ಸಂಘಕ್ಕೆ ರಾಜ್ಯದಲ್ಲೇ ಉತ್ತಮ ಹೆಸರಿದ್ದು ಇನ್ನಷ್ಟು ಜನೋಪಯೋಗಿ ಕಾರ್ಯಗಳನ್ನು ಸಮಾಜದ ಹಿರಿಯರೆಲ್ಲರ ವಿಶ್ವಾಸಕ್ಕೆ ಪಡೆದು ಮಾಡುವು ದಾಗಿ ಹೇಳುತ್ತಾರೆ.
ಶೆಟ್ಟಿಯವರಿಗೆ ಅಭಿನಂದನೆಗಳ ಮಹಾಪೂರವೇ ಹರಿದು ಬಂದಿದ್ದು ಮಾಜಿ ಸಭಾಪತಿ ಬಸವರಾಜ ಹೊರಟ್ಟಿಯವರು ಚುನಾವಣೆ ಬಿಡುವಿಲ್ಲದ ಪ್ರಚಾರದ ಮಧ್ಯೆಯೂ ಶಿಷ್ಯ ಶೆಟ್ಟಿಯವರನ್ನು ಸನ್ಮಾನಿಸಿ ಅಭಿನಂದಿಸಿದ್ದಾರೆ.