ಹುಬ್ಬಳ್ಳಿ-ಧಾರವಾಡ ಸುದ್ದಿ

ಉದ್ಯಮಿ ಶಿವಣ್ಣ ಬೆಲ್ಲದ ಇನ್ನಿಲ್ಲ

ಧಾರವಾಡ: ನಗರದ ಹಿರಿಯ ಉದ್ಯಮಿ, ಲಿಂಗಾಯತ ಸಮಾಜದ ಹಿರಿಯರು ಆದ ಶಿವಪುತ್ರಪ್ಪ (ಶಿವಣ್ಣ) ಗುರುಪ್ಪ ಬೆಲ್ಲದ (82) ಅವರು ಇಂದು ಬೆಳಗಿನ ಜಾವ ನಿಧನರಾದರು.


ನಗರದ ಹೊಸ ಬಸ್ ನಿಲ್ದಾಣ ಬಳಿ ನಿನ್ನೆ ಶಿವಣ್ಣ ಬೆಲ್ಲದ ಚಾಲನೆ ಮಾಡುತ್ತಿದ್ದ ಕಾರು ಡಿವೈಡರ್‌ಗೆ ಗುದ್ದಿ ಈ ಅಪಘಾತ ಸಂಭವಿಸಿ ಗಾಯಗೊಂಡಿದ್ದರು.
ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಧಾರವಾಡದ ಯುನಿಟಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಗಂಭೀರವಾಗಿ ಗಾಯಗೊಂಡು ಶಿವಣ್ಣ ಕೋಮಾಸ್ಥಿತಿಗೆ ತಲುಪಿದ್ದ ಅವರು, ಚಿಕಿತ್ಸೆ ಫಲಿಸದೇ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.


ಮಾಜಿ ಶಾಸಕ ಚಂದ್ರಕಾಂತ್ ಬೆಲ್ಲದ ಅವರ ಸಹೋದರ, ಶಾಸಕ ಅರವಿಂದ ಬೆಲ್ಲದ ಅವರ ಚಿಕ್ಕಪ್ಪರಾದ ಶಿವಣ್ಣ ಬೆಲ್ಲದ, ಪತ್ನಿ ಹಾಗೂ ಇಬ್ಬರು ಪುತ್ರರು, ಇಬ್ಬರು ಪುತ್ರಿಯರು ಸೇರಿದಂತೆ ಅಪಾರ ಬಳಗವನ್ನು ಅಗಲಿದ್ದಾರೆ.
ಸದ್ಯ ಧಾರವಾಡ ಬಸವ ತತ್ವ ಪ್ರಸಾರ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶಿವಣ್ಣ ಅವರು, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷರಾಗಿ, ನಾಡಿನ ಹಿರಿಯ ಸಂಸ್ಥೆ ಕರ್ನಾಟಕ ವಿದ್ಯಾವರ್ಧಕ ಸಂಘದ ಮಾಜಿ ಉಪಾಧ್ಯಕ್ಷರು, ಕಾರ್ಯಾಧ್ಯಕ್ಷರು ಸೇರಿದಂತೆ ಹಲವಾರು ಸಂಘ-ಸಂಸ್ಥೆಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ.

ಗಣ್ಯರ ಸಂತಾಪ

ಧಾರವಾಡ: ನಾಡಿನ ಹಿರಿಯ ಸಂಸ್ಥೆ ಕರ್ನಾಟಕ ವಿದ್ಯಾವರ್ಧಕ ಸಂಘದ ಮಾಜಿ ಉಪಾಧ್ಯಕ್ಷರು, ಕಾರ್ಯಾಧ್ಯಕ್ಷರು, ಸಮಾಜದ ಹಿರಿಯರು ಆದ ಶಿವಣ್ಣ ಬೆಲ್ಲದ ಅವರ ಅಕಾಲಿಕ ನಿಧನಕ್ಕೆ ಕರ್ನಾಟಕ ವಿದ್ಯಾವರ್ಧಕ ಸಂಘದ ಆಡಳಿತ ಮಂಡಳಿ ಸದಸ್ಯರು ಮತ್ತು ಅನೇಕ ಗಣ್ಯರು ತೀವ್ರ ಸಂತಾಪವ್ಯಕ್ತಪಡಿಸಿದ್ದಾರೆ.
ಶಿವಣ್ಣ ಬೆಲ್ಲದ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ, ಮಹೇಶ ಟೆಂಗಿನಕಾಯಿ, ಕವಿವ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳಾದ ಪ್ರೊ.ಮಾಲತಿ ಪಟ್ಟಣಶೆಟ್ಟಿ, ಬಸವಪ್ರಭು ಹೊಸಕೇರಿ, ಶಿವಾನಂದ ಭಾವಿಕಟ್ಟಿ, ಶಂಕರ ಹಲಗತ್ತಿ, ಶಂಕರ ಕುಂಬಿ ಮತ್ತು ಕಾರ್ಯಕಾರಿ ಸಮಿತಿ ಸದಸ್ಯರಾದ ಡಾ. ಸಂಜೀವ ಕುಲಕರ್ಣಿ, ಡಾ.ಶೈಲಜಾ ಅಮರಶೆಟ್ಟಿ, ವೀರಣ್ಣ ಒಡ್ಡೀನ, ಗುರು ಹಿರೇಮಠ, ಡಾ.ಶ್ರೀಶೈಲ ಹುದ್ದಾರ, ಡಾ.ಮಹೇಶ ಹೊರಕೇರಿ, ಡಾ.ಜಿನದತ್ತ ಹಡಗಲಿ, ವಿಶ್ವೇಶ್ವರಿ ಹಿರೇಮಠ, ಡಾ. ಧನವಂತ ಹಾಜವಗೋಳ ಹಾಗೂ ಶಾಸಕ ಅಮೃತ ದೇಸಾಯಿ, ತವನಪ್ಪ ಅಷ್ಟಗಿ, ಕಾಂಗ್ರೆಸ್ ಮುಖಂಡರಾದ ಇಸ್ಮಾಯಿಲ್ ತಮಟಗಾರ, ಪಿ.ಎಚ್.ನಿರಲಕೇರಿ, ಆರ್.ಕೆ.ಪಾಟೀಲ, ಡಾ.ಶರಣಪ್ಪ ಕೊಟಗಿ, ದೀಪಕ ಚಿಂಚೋರೆ, ಉದ್ಯಮಿ ಮಹೇಶ ಶೆಟ್ಟಿ, ಗಿರೀಶ ಶೆಟ್ಟಿ, ಕುಮಾರ ಚಿನಿವಾಲ, ಶಂಕರ ಮುಗದ, ರಾಜೇಶ ಕೊಟೆಣ್ಣನವರ, ಸವಿತಾ ಅಮರಶೆಟ್ಟಿ, ಸೀಮಾ ಮಸೂತಿ, ಸುನೀಲ ಸರೂರ, ಶಿವು ಹಿರೇಮಠ, ಶಿವಶಂಕರ ಹಂಪಣ್ಣವರ, ಶಿವಾನಂದ ಅಂಬಡಗಟ್ಟಿ, ಸುರೇಶ ಬೆದ್ರೆ, ಚಂದ್ರಶೇಖರ ಮನಗುಂಡಿ, ನಿತೀನ ಇಂಡಿ, ಶಂಬುಗೌಡ ಸಾಲಮನಿ, ಜ್ಯೋತಿ ಪಾಟೀಲ, ಬಸವ ತತ್ವ ಪ್ರಸಾರ ಸಂಸ್ಥೆಯ ಪದಾಧಿಕಾರಿಗಳು ಹಾಗೂ ಸದಸ್ಯರು ತಮ್ಮ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.


ಮಹಾಸಭಾ: ಶಿವಣ್ಣ ಬೆಲ್ಲದರ ಅಗಲಿಕೆಗೆ ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಗುರುರಾಜ ಹುಣಶಿಮರದ, ಪ್ರಧಾನ ಕಾರ್ಯರ್ಶಿ ಶಿವಶರಣ ಕಲಬಶೆಟ್ಟರ, ಕೋಶಾಧ್ಯಕ್ಷ ಬಿ.ಎಸ್.ಗೋಲಪ್ಪನವರ, ಪದಾಧಿಕಾರಿಗಳು ಮತ್ತು ಸದಸ್ಯರು ತೀವ್ರ ಶೋಕ ವ್ಯಕ್ತಪಡಿಸಿ, ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲೆಂದು ಪ್ರಾರ್ಥಿಸಿದ್ದಾರೆ.

 

administrator

Related Articles

Leave a Reply

Your email address will not be published. Required fields are marked *