ಹುಬ್ಬಳ್ಳಿ-ಧಾರವಾಡ ಸುದ್ದಿ
ಸಿದ್ದರಾಮಯ್ಯ ಬಂದ್ರೆ ಕ್ಷೇತ್ರ ಬಿಡುವೆ

ಸಿದ್ದರಾಮಯ್ಯ ಬಂದ್ರೆ ಕ್ಷೇತ್ರ ಬಿಡುವೆ

ಹುಬ್ಬಳ್ಳಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಲಘಟಗಿ ಕ್ಷೇತ್ರದಿಂದ ಸ್ಪರ್ಧಿಸಲು ಮುಂದಾದರೇ ಅವರಿಗೆ ಕ್ಷೇತ್ರ ಬಿಟ್ಟು ಕೊಡುವುದಾಗಿ ಮಾಜಿ ಸಚಿವ ಸಂತೋಷ ಲಾಡ್ ಹೇಳಿದರು.


ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರಿಗೆ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ರಾಜ್ಯದ ಹಲವೆಡೆಗಳಲ್ಲಿ ಅನೇಕರು ಆಹ್ವಾನಿಸುತ್ತಿದ್ದಾರೆ. ಈ ದಿಸೆಯಲ್ಲಿ ಅವರು ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಅದು ಅವರಿಗೆ ಬಿಟ್ಟ ವಿಷಯ. ಒಂದು ವೇಳೆ ಕಲಘಟಗಿಯಿಂದಲೂ ಸ್ಪರ್ಧಿಸಲು ಇಚ್ಛಿಸಿದರೆ ತಾವು ಕ್ಷೇತ್ರ ಬಿಟ್ಟುಕೊಡುವೆ ಎಂದರು.

ರಾಜಕೀಯ ಉದ್ದೇಶವಿಲ್ಲ: ರಾಜಕೀಯ ಉದ್ದೇಶಕ್ಕಾಗಿ ತಾವು ಸಾಮೂಹಿಕ ವಿವಾಹ ಏರ್ಪಡಿಸುತ್ತಿಲ್ಲ. ಅಲ್ಲದೇ ನಾನು ಸಾಮೂಹಿಕ ವಿವಾಹ ಮಾಡಿಸುವುದು ಹೊಸದಲ್ಲ. ಲಾಕ್ ಡೌನ್ ಕಾರಣಕ್ಕೆ ಮಾತ್ರ ಈ ಕಾರ್ಯ ಮಾಡಿರಲಿಲ್ಲ. ಇದೀಗ ಮತ್ತೆ ಸಾಮೂಹಿಕ ವಿವಾಹ ಏರ್ಪಡಿಸಲು ಮುಂದಾಗಿದ್ದೇವೆ. ಈ ಬಾರಿ 4000 ಸಾಮೂಹಿಕ ವಿವಾಹ ಮಾಡುವ ಪ್ರಯತ್ನ ಮಾಡುತ್ತಿದ್ದೇನೆ. ಇದು ವರ್ಲ್ಡ್ ರೆಕಾರ್ಡ್ ಕೂಡ ಆಗಬಹುದು. ಈಗಾಗಲೇ 1200 ವಿವಾಹ ಮಾಡಿದ್ದೇನೆ. ಮದುವೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯದ ಬೇರೆ ಬೇರೆ ಜಿಲ್ಲೆಗಳಿಂದ ವಿಚಾರಣೆಗಳು ಬರುತ್ತಿವೆ ಎಂದರು.

ಬಿಜೆಪಿಯವರು ಕೇವಲ ವಿವಾದದ ವಿಷಯವಾಗಿ ಮಾತನಾಡುತ್ತಾರೆ ವಿನಃ ಅವರಿಗೆ ಅಭಿವೃದ್ಧಿ ವಿಷಯ ಬೇಕಾಗಿಲ್ಲ. ವಿರೋಧ ಪಕ್ಷವಾಗಿ ಆಡಳಿತವನ್ನು ಟೀಕೆ ಮಾಡಿದರೇ ಅದಕ್ಕೆ ಪ್ರತಿ ಹೇಳಿಕೆ ಕೊಡುತ್ತಿದ್ದಾರೆ. ಜನ ಇದನ್ನು ಅರ್ಥ ಮಾಡಿಕೊಳ್ಳುತ್ತಾರೆ ಎಂದರು.

administrator

Related Articles

Leave a Reply

Your email address will not be published. Required fields are marked *