ಹುಬ್ಬಳ್ಳಿ-ಧಾರವಾಡ ಸುದ್ದಿ

ಲಾರಿ, ಕ್ಯಾಂಟರ್ ವಾಹನ ಮತ್ತು ಕಾರು ಡಿಕ್ಕಿ: ಒಬ್ಬ ಸಾವು

ಧಾರವಾಡ: ಲಾರಿ, ಕ್ಯಾಂಟರ್ ವಾಹನ ಮತ್ತು ಕಾರು ಡಿಕ್ಕಿ ಹೊಡೆದ ಪರಿಣಾಮ ಓರ್ವ ಸಾವನ್ನಪ್ಪಿದ ಪ್ರಕರಣ ನಿನ್ನೆ ರಾತ್ರಿ ನಗರದ ಹೊರವಲಯದ ತಪೋವನ ಬಳಿ ಹಳಿಯಾಳ ರಸ್ತೆಯಲ್ಲಿ ಸಂಭವಿಸಿದೆ.


ಚನ್ನಪಟ್ಟಣ ತಾಲೂಕು ಶೀಗೆನಹಳ್ಳಿಯ ಪ್ರಕಾಶ ಚಿನ್ನೆಗೌಡ(28) ಎಂಬಾತನೇ ಸ್ಥಳದಲ್ಲಿಯೇ ಮೃತಪಟ್ಟ ವ್ಯಕ್ತಿ ಎಂದು ಗುರುತಿಸಲಾಗಿದೆ. ಅತಿ ವೇಗದಿಂದ ಚಲಿಸುತ್ತಿದ್ದ ಲಾರಿ ಮೊದಲು ಕ್ಯಾಂಟರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿ ತಪ್ಪಿಸಲು ಹೋದ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಬಳಿಕ ಕಾರಿಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ.
ಈ ಸಂದರ್ಭದಲ್ಲಿ ಕ್ಯಾಂಟರ್ ವಾಹನ ಉರುಳಿ ಬಿದ್ದಿದ್ದು, ಕ್ಯಾಂಟರ್ ಚಾಲಕ ಪ್ರಕಾಶ ಚಿನ್ನೆಗೌಡ ತೀವ್ರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಅಸುನೀಗಿದ್ದಾನೆ. ಲಾರಿ ಮತ್ತು ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಅಲ್ಪಸ್ವಲ್ಪ ಗಾಯಗೊಂಡಿದ್ದಾರೆ.
ಲಾರಿ ಚಾಲಕನ ನಿರ್ಲಕ್ಯದ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಗೊತ್ತಾಗಿದೆ. ಘಟನಾ ಸ್ಥಳಕ್ಕೆ ಸಂಚಾರ ಠಾಣೆಯ ಪೊಲೀಸರು ಭೇಟಿ ನೀಡಿದ್ದರು. ಈ ಕುರಿತು ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

administrator

Related Articles

Leave a Reply

Your email address will not be published. Required fields are marked *