ಹುಬ್ಬಳ್ಳಿ-ಧಾರವಾಡ ಸುದ್ದಿ

ಧಾರವಾಡ: ಬೆಟ್ಟಿಂಗ್ ಕುಳಗಳ ಬಂಧನ

ಧಾರವಾಡ: ಕ್ರಿಕೆಟ್ ಬೆಟ್ಟಿಂಗ್‌ನಲ್ಲಿ ತೊಡಗಿದ್ದ ಇಬ್ಬರನ್ನು ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಇಲ್ಲಿನ ಶಹರ ಠಾಣೆಯ ಪೊಲೀಸರು ಬಂಧಿಸಿದ್ದಾರೆ.
ನಿನ್ನೆ ರಾತ್ರಿ ಐಪಿಎಲ್ ಕ್ರಿಕೆಟ್ ಆಟ ನಡೆಯುತ್ತಿದ್ದ ಸಂದರ್ಭದಲ್ಲಿ ಮಂಜುನಾಥ ಕಿತ್ತೂರ ಎಂಬುವನನ್ನು ಇನ್‌ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ ಮತ್ತು ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ. ದಾಳಿ ಸಂದರ್ಭದಲ್ಲಿ ಆತನಿಂದ 4700 ರೂಪಾಯಿ ನಗದು ಇನ್ನಿತರ ಸಾಮಗ್ರಿಗಳನ್ನು ಜಪ್ತಿ ಮಾಡಿದ್ದಾರೆ.
ಕಳೆದ ಶನಿವಾರ ರಾತ್ರಿ ಟಿಕಾರೆ ರಸ್ತೆಯಲ್ಲಿ ಸಾರ್ವಜನಿಕ ರಸ್ತೆಯಲ್ಲಿ ನಿಂತು ಬೆಟ್ಡಿಂಗ್ ನಡೆಸುತ್ತಿದ್ದ ಅಬೂಬಕ್ಕರ ಅಡ್ಡೆವಾಲೆ ಎಂಬುವನ್ನು ಇನ್‌ಸ್ಪೆಕ್ಟರ್ ಸಂಗಮೇಶ ದಿಡಿಗಿನಾಳ ಮತ್ತು ಸಿಬ್ಬಂದಿ ದಾಳಿ ನಡೆಸಿ ಬಂಧಿಸಿದ್ದಾರೆ. ಆರೋಪಿತನಿಂದ 15 ಸಾವಿರ ರೂಪಾಯಿ ನಗದು ಮತ್ತಿತರರ ಸಾಮಗ್ರಿಗಳನ್ನು ವಶಪಡಿಸಿಕೊಳ್ಳಲಾಗಿದೆ. ದಾಳಿ ಸಂದರ್ಭದಲ್ಲಿ ಇನ್ನೋರ್ವ ಆರೋಪಿ ಫಯಾಜ್ ತಡಕೋಡ ಪರಾರಿಯಾಗಿದ್ದಾನೆ. ಪೊಲೀಶರು ಬಂಧಿತರನ್ನು ನ್ಯಾಯಾಲಯಕ್ಕೆ ಒಪ್ಪಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *