ಹುಬ್ಬಳ್ಳಿ-ಧಾರವಾಡ ಸುದ್ದಿ

ಮದುವೆ ಊಟದ ಜಗಳ : ಬಿಡಿಸಲು ಹೋದವ ಸತ್ತ!

ಧಾರವಾಡ: ಮದುವೆಯಲ್ಲಿನ ಊಟದ ವಿಚಾರವಾಗಿ ಜಗಳ ನಡೆದು ಬಿಡಿಸಲು ಹೋದ ವ್ಯಕ್ತಿಯೇ ಸಾವನ್ನಪ್ಪಿರುವ ಘಟನೆ ನಗರದ ಪೆಂಡಾರ್ ಗಲ್ಲಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಸಾಧಿಕ್ ಮೋತಿಲಾಲ ಬಿಡ್ನಾಳ (40) ಎಂಬುವನೇ ಸಾವನ್ನಪ್ಪಿದ ವ್ಯಕ್ತಿಯಾಗಿದ್ದಾನೆ.
ಪೆಂಡಾರ್ ಗಲ್ಲಿಯ ಕಲ್ಯಾಣ ಮಂಟಪದಲ್ಲಿ ನಡೆಯುತ್ತಿದ್ದ ಮದುವೆಯಲ್ಲಿನ ಊಟದ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು. ಆಗ ಜಗಳ ಬಿಡಿಸಲು ಹೋದ ಸಂದರ್ಭದಲ್ಲಿನ ಗಲಾಟೆಯಲ್ಲಿ ಸಾಧಿಕ್ ಸಿಲುಕಿದ್ದರಿಂದ ಆತನ ತಲೆಗೆ ಪೆಟ್ಟು ಬಿದ್ದಿದೆ. ತೀವ್ರವಾಗಿ ಗಾಯಗೊಂಡಿದ್ದ ಆತನನ್ನು ಆಸ್ಪತ್ರೆಗೆ ದಾಖಲಿಸಲು ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯದಲ್ಲಿಯೇ ಸಾವನ್ನಪ್ಪಿದ್ದಾನೆ.
ಘಟನಾ ಸ್ಥಳಕ್ಕೆ ಶಹರ ಠಾಣೆಯ ಸಿಪಿಐ ಸಂಗಮೇಶ ದಿಡಿಗಿನಾಳ ಭೇಟಿ ನೀಡಿದ್ದರು.ಗಲಾಟೆ ನಡೆಸಿದನೆನ್ನಲಾದ ರಿಜ್ವಾನ್ ಎಂಬಾತನನ್ನು ವಶಕ್ಕೆ ಪಡೆದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *