ಹುಬ್ಬಳ್ಳಿ-ಧಾರವಾಡ ಸುದ್ದಿ
ಇಬ್ಬರು ಮಕ್ಕಳ ಕತ್ತು ಹಿಸುಕಿ, ನೇಣಿಗೆ ಶರಣಾದ ತಾಯಿ

ಇಬ್ಬರು ಮಕ್ಕಳ ಕತ್ತು ಹಿಸುಕಿ, ನೇಣಿಗೆ ಶರಣಾದ ತಾಯಿ

ಧಾರವಾಡ: ಗೃಹಿಣಿಯೊಬ್ಬಳು ತನ್ನ ಇಬ್ಬರು ಮಕ್ಕಳ ಕತ್ತು ಹಿಸುಕಿ ನಂತರ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ನವಲಗುಂದ ತಾಲೂಕಿನ ಮೊರಬ ಗ್ರಾಮದಲ್ಲಿ ನಡೆದಿದೆ.


ಮೃತ ಸಾವಿತ್ರಿ ಸರಕಾರ (32) ಎಂಬ ಗೃಹಿಣಿ ತನ್ನ ನಾಲ್ಕು ವರ್ಷದ ಮಗ ದರ್ಶನ್ ಹಾಗೂ 5 ವರ್ಷದ ಸುಮಾ ಎಂಬ ಎರಡು ಮಕ್ಕಳ ಕತ್ತು ಹಿಸುಕಿ ಕೊಂದು ಕೊನೆಗೆ ತಾನೂ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.


ಗೃಹಿಣಿಯ ಈ ತೀರ್ಮಾನಕ್ಕೆ ಕಾರಣ ಏನು ಎಂಬುದು ಇದುವರೆಗೂ ತಿಳಿದು ಬಂದಿಲ್ಲ. ಆಕೆಯ ಪತಿ ಉಳವಿ ಜಾತ್ರೆಗೆ ಹೋಗಿದ್ದ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಸ್ಥಳಕ್ಕೆ ನವಲಗುಂದ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಡಿಎಸ್‌ಪಿ ಎಸ್.ಎಂ.ನಾಗರಾಜ ಸ್ಥಳಕ್ಕೆ ಭೇಟಿ ನೀಡಿದ್ದರು.

administrator

Related Articles

Leave a Reply

Your email address will not be published. Required fields are marked *