ಹುಬ್ಬಳ್ಳಿ-ಧಾರವಾಡ ಸುದ್ದಿ
ಶ್ರೀನಗರ ಕ್ರಾಸ್ ಬಳಿ ಸರಣಿ ಅಪಘಾತ!

ಶ್ರೀನಗರ ಕ್ರಾಸ್ ಬಳಿ ಸರಣಿ ಅಪಘಾತ!

ಹುಬ್ಬಳ್ಳಿ: ನಗರದ ಶ್ರೀನಗರ ಕ್ರಾಸ್ ಬಳಿ ಸರಣಿ ಅಪಘಾತ ಸಂಭವಿಸಿದ ಪರಿಣಾಮ ಮೂರು ವಾಹನ ಜಖಂಗೊಂಡು, ವಾಹನ ಸವಾರರು ಪರಸ್ಪರ ಹೊಡೆದಾಡಿಕೊಂಡ ಘಟನೆ ನಡೆದಿದೆ.
ಶ್ರೀನಗರ ಕ್ರಾಸ್‌ನಲ್ಲಿ ನಿಂತಿದ್ದ ಬೋಲೆರೋ ವಾಹನ, ಇದರ ಹಿಂದೆ ನಿಂತಿದ್ದ ಸ್ವಿಫ್ಟ್ ಕಾರಿಗೆ ವೇಗವಾಗಿ ಬಂದ ಇಂಡಿಕಾ ಕಾರೊಂದು ಡಿಕ್ಕಿ ಹೊಡೆದಿದೆ. ಇದರಿಂದ ಮೂರು ವಾಹನಗಳು ಜಖಂಗೊಂಡಿವೆ.
ಇಂಡಿಕಾ ಕಾರಿನ ಚಾಲಕನ ನಿರ್ಲಕ್ಷ್ಯದಿಂದಲೇ ಘಟನೆ ನಡೆದಿದ್ದರಿಂದ ಚಾಲಕರು ಸ್ಥಳದಲ್ಲೇ ಹೊಡೆದಾಡಿಕೊಂಡಿದ್ದು, ಅಷ್ಟರಲ್ಲಿಯೇ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಧಾವಿಸಿದ ಉತ್ತರ ಸಂಚಾರಿ ಪೊಲೀಸರು ಅಪಘಾತವಾದ ಮೂರು ವಾಹನಗಳನ್ನು ಠಾಣೆಗೆ ತೆಗೆದು ಕೊಂಡು ಬಂದು ವಿಚಾರಣೆ ನಡೆಸುತ್ತಿದ್ದಾರೆ.

 

administrator

Related Articles

Leave a Reply

Your email address will not be published. Required fields are marked *