ಹುಬ್ಬಳ್ಳಿ-ಧಾರವಾಡ ಸುದ್ದಿ

ಸವದಿಗೆ ಮಂತ್ರಿಸ್ಥಾನ ನೀಡಿ: ಕಲ್ಲಿನಾಥ ಸ್ವಾಮೀಜಿ ಆಗ್ರಹ

ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಕೂಡಲೆ ಸಚಿವ ಸಂಪುಟದಲ್ಲಿ ಗಾಣಿಗ ಸಮಾಜದವರಿಗೆ ಸ್ಥಾನ ಮಾನ ನೀಡಬೇಕಲ್ಲದೇ ಹಿರಿಯರಾದಂತಹ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ವಿಜಯಪುರದ ದಿಗಂಬರೇಶ್ವರ ಸಂಸ್ಥಾನಮಠದ ಕಲ್ಲಿನಾಥ ಸಾಮೀಜಿ ಆಗ್ರಹಿಸಿದರು.


ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಗಾಣಿಗ ಸಮಾಜದವರಿಗೆ ಸಚಿವ ಸ್ಥಾನ ನೀಡಬೇಕು. ಆದರೆ ಗಾಣಿಗ ಸಮಾಜದ ಯಾರೊಬ್ಬರು ಶಾಸಕರಾಗಿ ಆಯ್ಕೆಯಾಗಿಲ್ಲ. ಲಕ್ಷ್ಮಣ ಸವದಿ ಅವರು ಮಾತ್ರ ವಿಧಾನ ಪರಿಷತ್‌ಗೆ ಆಯ್ಕೆ ಯಾಗಿದ್ದರಿಂದ ಮರಳಿ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡುವಂತೆ ಮುಖ್ಯಮಂತ್ರಿ ಬೊಮ್ಮಾಯಿ ಅವರಲ್ಲಿ ವಿನಂತಿಸಿದರು.
ಗಾಣಿಗ ಸಮುದಾಯ ಇಡಿ ರಾಜ್ಯದಲ್ಲಿ 85 ಲಕ್ಷ ಕ್ಕೂ ಅಧಿಕ ಮತದಾರರಿ ದ್ದಾರೆ. ಶಿಗ್ಗಾಂವಿ ಕ್ಷೇತ್ರದಲ್ಲಿ 25ಸಾವಿರಕ್ಕೂ ಹೆಚ್ಚು ಮತದಾರರು ಗಾಣಿಗ ಸಮಾಜದವರು ಇದ್ದಾರೆ. ಜೊತೆಗೆ ಮುಂದಿನ ಚುಣಾವಣೆಯಲ್ಲಿ ಬೊಮ್ಮಾಯಿ ಅವರು ಚುಣಾವಣೆಯಲ್ಲಿ ಗೆಲುವು ಸಾಧಿಸಬೇಕಾದರೆ ಕೂಡಲೆ ಸಚಿವ ಸಂಪುಟದಲ್ಲಿ ಹಿರಿಯರಾದಂತಹ ಲಕ್ಷ್ಮಣ ಸವದಿ ಅವರಿಗೆ ಸಚಿವ ಸ್ಥಾನ ನೀಡಬೆಕು ಎಂದು ಸ್ವಾಮೀಜಿ ಅವರು ಆಗ್ರಹಿಸಿದರು.
ಗೋಷ್ಠಿಯಲ್ಲಿ ಸಮುದಾಯದ ಮುಖಂಡರಾದ ಚಂದ್ರಶೇಖರ ಕಾಕಂಡಕಿ, ಬಸವರಾಜ ಇದ್ದರು.

 

administrator

Related Articles

Leave a Reply

Your email address will not be published. Required fields are marked *