ಹುಬ್ಬಳ್ಳಿ-ಧಾರವಾಡ ಸುದ್ದಿ

ಅತ್ಯಾಚಾರ ಆರೋಪಿಗಳ ಬಂಧನಕ್ಕೆ ಅಂಜುಮನ್ ಆಗ್ರಹ

ಧಾರವಾಡ: ದೇಶದ ವಿವಿಧ ಭಾಗಗಳಲ್ಲಿ ಮಹಿಳೆಯರ ಮೇಲೆ ನಡೆದ ಅತ್ಯಾಚಾರ ಪ್ರಕರಣಗಳಲ್ಲಿನ ಆರೋಪಿಗಳನ್ನು ಕೂಡಲೇ ಬಂಧಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಅಂಜುಮನ್ ಇಸ್ಲಾಂ ಸಂಸ್ಥೆಯ ನೇತೃತ್ವದಲ್ಲಿ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.


ಮೈಸೂರನಲ್ಲಿ ಯುವತಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಮರೆಯಾಗು ವಷ್ಟರಲ್ಲಿ ದೆಹಲಿ ಮತ್ತು ಮುಂಬಯಿಗಳಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣಗಳು ನಡೆದಿವೆ. ದೆಹಲಿಯಲ್ಲಿ ಇತ್ತಿಚಿಗೆ ಸಬೀಯಾ ಶೇಫಿ ಎನ್ನುವ ಪೊಲೀಸ್ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಹೆಣ್ಣು ಮಗಳನ್ನು ಅತ್ಯಾಚಾರಮಾಡಿ ಬರ್ಬರ ಹತ್ಯೆಗೈಯ್ಯಲಾಗಿದ್ದು, ಇಡೀ ದೇಶವನ್ನೇ ತಲ್ಲಣಗೊಳಿಸಿದೆ.
ಆದ್ದರಿಂದ ಸರಕಾರ ಕೂಡಲೇ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಿ, ನಿಷ್ಪಕ್ಷ ತನಿಖೆ ನಡೆಸಲು ಮುಂದಾಗಬೇಕು. ಈ ಮೂಲಕ ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸುವ ಹೊಣೆ ನಿಭಾಯಿಸುವಂತೆ ಸರಕಾರಗಳಿಗೆ ಸೂಕ್ತ ನಿರ್ದೇಶನ ನೀಡಬೇಕು ಎಂದು ಜಿಲ್ಲಾಧಿಕಾರಿಗಳ ಮೂಲಕ ಸಲ್ಲಿಸಿದ ಮನವಿಯಲ್ಲಿ ರಾಷ್ಟ್ರಪತಿಗಳನ್ನು ಆಗ್ರಹಿಸಲಾಯಿತು.
ಅಂಜುಮನ್ ಸಂಸ್ಥೆಯ ಅಧ್ಯಕ್ಷ ಇಕ್ಬಾಲ್ ಜಮಾದಾರ, ಉಪಾಧ್ಯಕ್ಷ ಆಶ್ಪಾಕ್‌ಅಹ್ಮದ ಬೆಟಗೇರಿ, ಆಡಳಿತ ಮಂಡಳಿ ಸದಸ್ಯರಾದ ರಿಯಾಜ್‌ಅಹ್ಮದ ನನ್ನೇಸಾಬನವರ, ಬಶೀರಹ್ಮದ ಜಾಗೀರದಾರ, ಮೊಹ್ಮದಹನೀಫ್ ಮುನ್ಶಿ ಮತ್ತಿತರರು ಮನವಿ ಸಲ್ಲಿಸಿದರು.

administrator

Related Articles

Leave a Reply

Your email address will not be published. Required fields are marked *