ಹುಬ್ಬಳ್ಳಿ-ಧಾರವಾಡ ಸುದ್ದಿ
ತಂದೆ-ತಾಯಿ ಸಮಾಧಿಗೆ ಸಿಎಂ ಪೂಜೆ

ತಂದೆ-ತಾಯಿ ಸಮಾಧಿಗೆ ಸಿಎಂ ಪೂಜೆ

ಹುಬ್ಬಳ್ಳಿ: ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿ ಬಸವರಾಜ ಬೊಮ್ಮಾಯಿ ಅವರು ಅಮರಗೋಳದಲ್ಲಿರುವ ಮಾತೋಶ್ರೀ ಗಂಗಮ್ಮ ಎಸ್ ಬೊಮ್ಮಾಯಿ ಹಾಗೂ ತಂದೆ, ಮಾಜಿ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಿ ,ಗೌರವ ಸಮರ್ಪಿಸಿದರು.
ತಂದೆ-ತಾಯಿಯ ಸಮಾಧಿಗೆ ಪ್ರದಕ್ಷಿಣೆ ಹಾಕಿ ಕೆಲ ನಿಮಿಷ ಮೌನವಾಗಿ ಸ್ಮರಣೆ ಮಾಡಿದರು.ಉಭಯ ಪುತ್ಥಳಿಗಳಿಗೆ ಮಾಲಾರ್ಪಣೆ ಮಾಡಿದರು.
ನಂತರ ಮಾಧ್ಯಮ ಪ್ರತಿನಿಧಿಗಳಿಗೆ ಪ್ರತಿಕ್ರಿಯಿಸಿ ತಂದೆ, ತಾಯಿಯವರ ಆಶೀರ್ವಾದ ಎಲ್ಲಕ್ಕೂ ಮಿಗಿಲು ಅಧಿಕಾರ ಸ್ವೀಕರಿಸಿದ ನಂತರ ಅವರ ಸಮಾಧಿಗಳ ದರ್ಶನ ಪಡೆದಿರುವೆ ಎಂದರು.
ಶಾಸಕರಾದ ಅಮೃತ ದೇಸಾಯಿ, ಮಾಜಿ ಸಚಿವ, ಶಾಸಕ ಶಿವರಾಮ್ ಹೆಬ್ಬಾರ , ರಾಜ್ಯ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷೆ ಸವಿತಾ ಅಮರಶೆಟ್ಟಿ, ಧಾರವಾಡ ಕೆಸಿಸಿ ಬ್ಯಾಂಕ್ ಅಧ್ಯಕ್ಷ ಮಲ್ಲಿಕಾರ್ಜುನ ಹೊರಕೇರಿ, ಅಜ್ಜಪ್ಪ ಹೊರಕೇರಿ, ಮಂಜುನಾಥ ಉಡುಪಿ,ಚಂದ್ರಶೇಖರ ಮನಗುಂಡಿ ಸೇರಿದಂತೆ ಕುಟುಂಬದ ಬಂಧುಗಳು, ರಾಜಕೀಯ ಪಕ್ಷಗಳ ಮುಖಂಡರು, ಅಭಿಮಾನಿಗಳು ನೆರೆದಿದ್ದರು.


ರಂಭಾಪುರಿ ಶ್ರೀಗಳಿಂದ ಬೊಮ್ಮಾಯಿಗೆ ಆಶೀರ್ವಾದ

ಹುಬ್ಬಳ್ಳಿ : ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಹುಬ್ಬಳ್ಳಿಗೆ ಆಗಮಿಸಿದ ಬಸವರಾಜ ಬೊಮ್ಮಾಯಿ ವಿದ್ಯಾನಗರದ ರಂಭಾಪುರಿ ಕಲ್ಯಾಣ ಮಂಟಪದಲ್ಲಿ0ದು ರಂಭಾಪುರಿ ಜಗದ್ಗುರುಗಳ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ನೂತನ ಮುಖ್ಯಮಂತ್ರಿಗಳನ್ನು ಸನ್ಮಾನಿಸಿ ಮಾತನಾಡಿದ ಶ್ರೀಗಳು ಬೊಮ್ಮಾಯಿಯವರ ಆಡಳಿತದಲ್ಲಿ ರಾಜ್ಯ ಪ್ರಗತಿ ಹೊಂದಲೆ0ದು ಹಾರೈಸಿದರು.

administrator

Related Articles

Leave a Reply

Your email address will not be published. Required fields are marked *