ಹುಬ್ಬಳ್ಳಿ-ಧಾರವಾಡ ಸುದ್ದಿ

ಸಚಿವ ಸಂತೋಷ್ ಲಾಡ್ ಪುತ್ರನ ಪುಸ್ತಕ ಬಿಡುಗಡೆ

ಬೆಂಗಳೂರು: ರಾಜ್ಯದ ಕಾರ್ಮಿಕ ಇಲಾಖೆ ಸಚಿವ ಸಂತೋಷ್ ಲಾಡ್ ಅವರ ಪುತ್ರ ಕರಣ್ ಲಾಡ್ ಬರೆದಿರುವ ’ ಎ ಗ್ಲಿಚ್ ಇನ್ ದಿ ಸಿಮುಲೇಶನ್’ ಬಿಡುಗಡೆ ಸಮಾರಂಭ ಇತ್ತೀಚೆಗೆ ಬೆಂಗಳೂರಿನ ಖಾಸಗಿ ಹೊಟೆಲ್‌ನಲ್ಲಿ ನಡೆಯಿತು.


ಬಿಡುಗಡೆ ಸಮಾರಂಭದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಎಂ ಬಿ. ಪಾಟೀಲ್, ಕೆ.ಎಚ್. ಮುನಿಯಪ್ಪ, ದಿನೇಶ್ ಗುಂಡೂರಾವ್, ಡಾ. ಎಂ ಸಿ. ಸುಧಾಕರ್, ಬೋಸರಾಜು, ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ವಿಧಾನಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಚಿವ ಸಂತೋಷ್ ಲಾಡ್ ಕುಟುಂಬದ ಸದಸ್ಯರು, ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಕೇವಲ 18ನೇ ವಯಸ್ಸಿಗೆ ಪುಸ್ತಕ ರಚಿಸಿರುವ ಕರಣ್ ಸಾಧನೆ ನಿಜಕ್ಕೂ ಪ್ರಶಂಸನೀಯ ಹಾಗೂ ಇವತ್ತಿನ ಯುವ ಪೀಳಿಗೆಗೆ ಸ್ಪೂರ್ತಿದಾಯಕ ಎಂದು ಮಾತನಾಡಿದ ಗಣ್ಯರು ಹೇಳಿದರು.

 

administrator

Related Articles

Leave a Reply

Your email address will not be published. Required fields are marked *