ಹುಬ್ಬಳ್ಳಿ-ಧಾರವಾಡ ಸುದ್ದಿ

15 ದಿನದಲ್ಲಿ 5 ದಿನಕ್ಕೊಮ್ಮೆ ನೀರು ಪೂರೈಸದಿದ್ದರೆ ಕ್ರಮ

ಎಲ್ ಆಂಡ್ ಟಿಗೆ ಸಚಿವ ಜೋಶಿ ಖಡಕ್ ಎಚ್ಚರಿಕೆ

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಅವಳಿನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರದ ಬಗ್ಗೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಉಪಸ್ಥಿತಿಯಲ್ಲಿ ನಗರಾಭಿವೃದ್ಧಿ ಸಚಿವರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ವಿಶೇಷ ಸಭೆಯನ್ನು ಆಯೋಜಿಸಲಾಗಿತ್ತು.


ಈ ಸಭೆಯಲ್ಲಿ ಹದಿನೈದು ದಿನಗಳೊಗಾಗಿ ಪೂರ್ಣ ಪ್ರಮಾಣದಲ್ಲಿ ಜವಾಬ್ದಾರಿ ವಹಿಸಿಕೊಂಡು ಕನಿಷ್ಠ ಐದು ದಿನಕ್ಕೊಮ್ಮೆ ನೀರು ಸರಬರಾಜು ಮಾಡದೇ ಹೋದಲ್ಲಿ ಗುತ್ತಿಗೆದಾರರಾದ ಎಲ್ ಆಂಡ್ ಟಿ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದಲ್ಲದೇ ಒಪ್ಪಂದ ಕೊನೆಗೊಳಿಸಿ ಪರ್‍ಯಾಯ ಮಾರ್ಗ ಹುಡುಕುವದಾಗಿ ಕೇಂದ್ರ ಸಚಿವ ಜೋಶಿ ಹಾಗೂ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ ಖಡಕ್ ಎಚ್ಚರಿಕೆ ನೀಡಿದರು.

ಈ ಸಭೆಯಲ್ಲಿ ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ, ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಅವರು ಸಭೆಗೆ ಸಲಹೆ ಸೂಚನೆ ನೀಡಿದ ರಲ್ಲದೇ ಮುಂದಿನ ದಿನಗಳಲ್ಲಿ ನೀರು ಸರಬರಾಜು ನಿರ್ವಹಣೆ ಸಮರ್ಪಕವಾಗಿರ ಬೇಕೆಂದು ಹೇಳಿದರು.

ಸಭೆಯಲ್ಲಿ ಶಾಸಕ ಅರವಿಂದ ಬೆಲ್ಲದ, ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ಹುಬ್ಬಳ್ಳಿ ಧಾರವಾಡ ಮೇಯರ್ ಈರೇಶ ಅಂಚಟಗೇರಿ, ನಗರಾಭಿವೃದ್ಧಿ ಕಾರ್ಯದರ್ಶಿ ಅಜಯ ನಾಗಭೂಷಣ, ದೀಪಾ ಚೋಳನ, ವಾಟರ ಬೋರ್ಡ್ ಅಧಿಕಾರಿಗಳು,ಧಾರವಾಡ ವಿಭಾಗದಿಕಾರಿ ಮೋಹನರಾಜ, ಧಾರವಾಡ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಆರ್ ವಿಶಾಲ, ಪಾಲಿಕೆ ಆಯುಕ್ತರು ಗೋಪಾಲಕೃಷ್ಣ ಹಾಗು ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಕೇಂದ್ರ ಸಚಿವರು ನಿರ್ದಿಷ್ಟವಾದ ಸೂಚನೆ ನೀಡಿ ಕೂಡಲೇ ಕಾಮಗಾರಿಗಳು ಕ್ಷಿಪ್ರ ಗತಿಯಲ್ಲಿ ಜರುಗಬೇಕು ಹಾಗು ಪ್ರತಿ ಐದು ದಿನಕ್ಕೊಮ್ಮೆ ನೀರು ಸರಬರಾಜು ಆಗಲೆಬೇಕೆಂದು ಸ್ಪಷ್ಟ ಸೂಚನೆ ನೀಡಿದರು.

 

administrator

Related Articles

Leave a Reply

Your email address will not be published. Required fields are marked *