ಹುಬ್ಬಳ್ಳಿ-ಧಾರವಾಡ ಸುದ್ದಿ

4.42 ಲಕ್ಷ ರೂ ಅಕ್ರಮ ದಾಸ್ತಾನಿನ ಅಕ್ಕಿ ಜಪ್ತಿ

ಎಪಿಎಂಸಿ ಗೋದಾಮಿನಲ್ಲಿ ಸಂಗ್ರಹ: ಒಬ್ಬ ಅಂದರ್

ಹುಬ್ಬಳ್ಳಿ: ಬಡವರಿಗೆ ವಿತರಣೆ ಮಾಡಬೇಕಿದ್ದ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹ ಮಾಡಿದ್ದ ಮಳಿಗೆಯನ್ನು ಪತ್ತೆ ಹಚ್ಚಿದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್‌ನ ಸಿಸಿಬಿ ವಿಭಾಗದ ಪೊಲೀಸರು ಸುಮಾರು 4.42 ಲಕ್ಷ ರೂ. ಮೌಲ್ಯದ ಜಪ್ತಿ ಮಾಡಿ ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ.


ಹುಬ್ಬಳ್ಳಿಯ ಅಮರಗೋಳ ಎಪಿಎಂಸಿಯ ಗೋದಾಮಿನಲ್ಲಿ ಅಕ್ರಮವಾಗಿ ಪಡಿತರ ಅಕ್ಕಿಯನ್ನು ಸಂಗ್ರಹ ಮಾಡಿದ್ದವ ವೀರಾಪುರ ಓಣಿಯ ಸಂದೀಪ ಶಶಿಕಾಂತ ಜರತಾರಘರ(33) ಎಂಬಾತನೇ ಬಂಧಿಸಲ್ಪಟ್ಟವನಾಗಿದ್ದಾನೆ. ಸಂಗ್ರಹಿಸಿದ್ದ ಅಕ್ಕಿಯನ್ನು ಕಾಳಸಂತೆಯಲ್ಲಿ ಹೆಚ್ಚಿನ ಬೆಲೆಗೆ ಮಾರಾಟ ಮಾಡಲು ಯೋಚನೆ ಮಾಡಿದ್ದ ಆರೋಪಿ ಸಂದೀಪ ಸಿಸಿಬಿ ತಂಡದ ಕೈಗೆ ಸಿಕ್ಕಿ ಬಿದ್ದಿದ್ದು, ದಾಳಿ ವೇಳೆ 4.42 ಲಕ್ಷ ರೂ ಮೌಲ್ಯದ 130 ಕ್ವಿಂಟಾಲ್ ಪಡಿತರ ಅಕ್ಕಿಯನ್ನು ವಶಕ್ಕೆ ಪಡಿಸಿಕೊಂಡಿದ್ದಾರೆ.


ಆರೋಪಿಯನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ಈ ಕುರಿತು ಎಪಿಎಂಸಿ ನವನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸಿಸಿಬಿ ಕಾರ್ಯಾಚರಣೆಯನ್ನು ಪೊಲೀಸ್ ಆಯುಕ್ತರು ಪ್ರಶಂಸಿಸಿದ್ದಾರೆ.

administrator

Related Articles

Leave a Reply

Your email address will not be published. Required fields are marked *