ಹುಬ್ಬಳ್ಳಿ-ಧಾರವಾಡ ಸುದ್ದಿ

ಜನತೆ ತೀರ್ಪು ಗೌರವಿಸುವೆ: ಡಿಸಿ

ಧಾರವಾಡ: ಪ್ರಸಕ್ತ ಚುನಾವಣೆಯಲ್ಲಿ ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರದ ಜನರ ತೀರ್ಪನ್ನು ಗೌರವಿಸುವೆ ಎಂದು ಎಐಸಿಸಿ ಸದಸ್ಯ ದೀಪಕ ಚಿಂಚೋರೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಚುನಾವಣೆಯಲ್ಲಿ ಸೋಲು-ಗೆಲುವು ಸಹಜ. ಹೀಗಾಗಿ ಸೋಲನ್ನು ಸಮಚಿತ್ತದಿಂದ ಸ್ವೀಕರಿಸುವೆನು. ಪ್ರಚಾರ ಸಂದರ್ಭದಲ್ಲಿ ಪಕ್ಷದ ಪರವಾಗಿ ಪ್ರಾಮಾಣಿಕವಾಗಿ ಶ್ರಮಿಸಿದ ಮುಖಂಡರು, ಅದರಲ್ಲಿಯೂ ಕಾರ್ಯಕರ್ತರು ವಿಚಲಿತರಾಗಬಾರದು ಎಂದಿದ್ದಾರೆ.


ಕೆಲವು ಕ್ಷೇತ್ರಗಳಲ್ಲಿ ಹಿನ್ನಡೆಯಾದರೂ ರಾಜ್ಯದಲ್ಲಿ ಕಾಂಗ್ರೆಸ್ ಜನಾಶೀರ್ವಾದ ಪಡೆದು ಅಧಿಕಾರಕ್ಕೇರಿದ್ದು ಸಂತಸದ ವಿಷಯ. ನನ್ನ ಪ್ರಾಮಾಣಿಕ ಹೋರಾಟ, ಜನಪರ ಕಾಳಜಿಯನ್ನು ಪ್ರೋತ್ಸಾಹಿಸುವ ದಿಸೆಯಲ್ಲಿ ಮತ ನೀಡಿದ ಕ್ಷೇತ್ರದ ಮತದಾರರಿಗೆ ಕೃತಜ್ಞತೆಗಳು. ಜನರ ಕಷ್ಟಗಳು ಮತ್ತು ಕ್ಷೇತ್ರದ ಅಭಿವೃದ್ಧಿಯ ವಿಷಯದಲ್ಲಿ ಮುಂಬರುವ ದಿನಗಳಲ್ಲಿ ಸದಾ ತೊಡಗಿಸಿಕೊಳ್ಳುವೆ ಎಂದಿದ್ದಾರೆ.

 

administrator

Related Articles

Leave a Reply

Your email address will not be published. Required fields are marked *