ಹುಬ್ಬಳ್ಳಿ-ಧಾರವಾಡ ಸುದ್ದಿ
ಬೇರೆ ಪಕ್ಷಕ್ಕೆ ಹೋಗಲ್ಲ : ಮುನೇನಕೊಪ್ಪ

ಬೇರೆ ಪಕ್ಷಕ್ಕೆ ಹೋಗಲ್ಲ : ಮುನೇನಕೊಪ್ಪ

ರಾಯಚೂರು: ಬೇರೆ ಪಕ್ಷದ ಜತೆ ಬಿಜೆಪಿ ಶಾಸಕರ ಸಂಪರ್ಕದ ಬಗ್ಗೆ ಗೊತ್ತಿಲ್ಲ. ಆದರೆ, ನನಗೆ ರಾಜಕೀಯ ಬದ್ಧತೆ ಇದ್ದು, ನಾನು ಎಲ್ಲಿಯೂ ಹೋಗುವುದಿಲ್ಲ ಎಂದು ಸಕ್ಕರೆ ಮತ್ತು ಜವಳಿ ಖಾತೆ ಸಚಿವ ಶಂಕರ ಪಾಟೀಲ್ ಮುನೇನಕೊಪ್ಪ ತಿಳಿಸಿದರು.
ನಗರದ ಡಿಎಆರ್ ಪರೇಡ್ ಮೈದಾನದಲ್ಲಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಮಾಜಿ ಸಿಎಂ ಸಿದ್ದರಾಮಯ್ಯನವರು ಜನತಾ ಪರಿವಾರದಿಂದಲೂ ಆತ್ಮೀಯರು. ಇಂದಿಗೂ ಅದೇ ಆತ್ಮೀಯತೆ ಇದೆ. ಆದರೆ ಬಿಜೆಪಿ ಶಾಸಕರು ಕಾಂಗ್ರೆಸ್ ಕದ ತಟ್ಟುತ್ತಿ ದ್ದಾರೆ ಎನ್ನುವುದು ಕಾಂಗ್ರೆಸ್‌ನವರ ರಾಜಕೀಯ ಹೇಳಿಕೆ. ತಾವು ಅಧಿಕಾರಕ್ಕೆ ಬರಬೇಕು ಎನ್ನುವ ಉತ್ಸಾಹದಲ್ಲಿ ಕಾಂಗ್ರೆಸ್ ನವರು ಮಾತನಾಡುತ್ತಿದ್ದಾರೆ. ಚುನಾವಣೆ ಮುಂದಿಟ್ಟುಕೊಂಡು ಅಧಿಕಾರದಾಸೆಗೆ ಈ ರೀತಿ ಹೇಳಿಕೆ ನೀಡುತ್ತಿದ್ದಾರೆ ಎಂದರು.
ಕಾಂಗ್ರೆಸ್ ನ ೧೬ ಶಾಸಕರು ನಮ್ಮ ಸಂಪರ್ಕದಲ್ಲಿದ್ದಾರೆ ಎಂಬ ರಮೇಶ ಜಾರಕಿಹೊಳಿ ಮಾತು ನಿಜವಾಗಿರಬಹುದು. ನಮ್ಮ ಸರ್ಕಾರ ಬರಲು ರಮೇಶ ಜಾರಕಿಹೊಳಿ ಪ್ರಮುಖರು. ಕಾಂಗ್ರೆಸ್‌ನಲ್ಲಿ ಅವರಿಗೆ ಸಾಕಷ್ಟು ಜನ ಸಂಪರ್ಕದಲ್ಲಿದ್ದಾರೆ ಎಂದರು.

administrator

Related Articles

Leave a Reply

Your email address will not be published. Required fields are marked *