ಹುಬ್ಬಳ್ಳಿ-ಧಾರವಾಡ ಸುದ್ದಿ
ಪ್ರಹ್ಲಾದ ಜೋಶಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ: ಹೊರಟ್ಟಿ

ಪ್ರಹ್ಲಾದ ಜೋಶಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ: ಹೊರಟ್ಟಿ

ಹುಬ್ಬಳ್ಳಿ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ನನ್ನ ಮೇಲೆ ಪ್ರೀತಿ ಜಾಸ್ತಿ ಇದೆ. ಅದಕ್ಕೆ ನನ್ನ ಬಗ್ಗೆ ಅಷ್ಟು ಕಾಳಜಿ ವಹಿಸುತ್ತಾರೆ. ನಾನು ಬಿಜೆಪಿ ಸೇರುವ ಕುರಿತು ಇನ್ನು ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣೆ ಬಗ್ಗೆ ಮೇ ತನಕ್ಕೆ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದರು.ಸದನದಲ್ಲಿ ಕಾಂಗ್ರೆಸ್ ಧರಣಿ ವಿಚಾರವಾಗಿ, ಅವರು ಕೊಡಂಗಿಲ್ಲ ಅಂತಾರೆ, ಇವರು ಬಿಡಂಗಿಲ್ಲ ಅಂತಾರೆ ಎಂದರು.
ಇಡೀ ರಾಜ್ಯದ ಜನತೆಗೆ ನಾವು ಅನ್ಯಾಯ ಮಾಡುತ್ತಿದ್ದೇವೆ. ನಾನು ಸಭಾಪತಿಯಾಗಿ ಮಾತನಾಡುತ್ತಿಲ್ಲ. ಸಾಮಾನ್ಯ ಪ್ರಜೆಯಾಗಿ ಹೇಳುತ್ತಿದ್ದೇನೆ. ನಾವು ಜನರಿಗೆ ಮೋಸ, ಅವಮಾನ, ಕೆಟ್ಟದು ಮಾಡುತ್ತಿದ್ದೇವೆ. ವಿರೋಧ ಪಕ್ಷದವರ ಮನವೊಲಿಸಲು ಪ್ರಯತ್ನ ಮಾಡುತ್ತೇನೆ. ಸದನ ನಡೆಯದಿರುವ ಬಗ್ಗೆ ಬಹಳಷ್ಟು ನೋವಿದೆ. ಜನರ ಕೋಟ್ಯಂತರ ರೂಪಾಯಿ ಪೋಲು ಆಗುತ್ತಿದೆ ಎಂದು ತೀವ್ರ ಬೇಸರ ವ್ಯಕ್ತ ಪಡಿಸಿದರು.

administrator

Related Articles

Leave a Reply

Your email address will not be published. Required fields are marked *