ಹುಬ್ಬಳ್ಳಿ-ಧಾರವಾಡ ಸುದ್ದಿ

ಬೆಲೆ ಏರಿಕೆ ಖಂಡಿಸಿ ’ಕೈ’ ವಿನೂತನ ಪ್ರತಿಭಟನೆ

ಹುಬ್ಬಳ್ಳಿ: ಪಂಚರಾಜ್ಯಗಳ ಚುನಾವಣೆ ನಂತರ ಪ್ರಧಾನಿ ಮೋದಿ ಸರ್ಕಾರ್ ಕೈಗೊಳ್ಳುತ್ತಿರುವ ಪೆಟ್ರೋಲ್, ಡೀಸೆಲ್, ಗ್ಯಾಸ್ ನಿತ್ಯ ಬೆಲೆ ಏರಿಕೆ ಇಂದಾಗಿ ಜನ ಸಾಮಾನ್ಯರ ಜೀವನ ದುಸ್ಥರವಾಗಿದೆ ಎಂದು ಆರೋಪಿಸಿ ನಗರದಲ್ಲಿಂದು ವಿದ್ಯಾನಗರ ಮತ್ತು ಉಣಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ವಿನೂತನ ಪ್ರತಿಭಟನೆ ನಡೆಸುವ ಮೂಲಕ ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನ ನಡೆಸಲಾಯಿತು.


ನಗರದ ಗೋಪನಕೊಪ್ಪ ವೃತ್ತದಲ್ಲಿ ಬೆಲೆ ಏರಿಕೆ ಮುಕ್ತ ಭಾರತ ಅಭಿಯಾನದ ಭಾಗವಾಗಿ ಸಿಲಿಂಡರ್, ಸ್ಕೂಟರ್, ಬೈಕ್ ಇತ್ಯಾದಿಗಳಿಗೆ ಹೂವಿನ ಹಾರಾ ಹಾಕಿ, ಹಲಗಿ ಬಾರಿಸುವ ಮೂಲಕ ಶ್ರದ್ಧಾಂಜಲಿ ಸಲ್ಲಿಸಿ ವಿನೂತನ ಪ್ರತಿಭಟನೆ ನಡೆಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.

ಕೇಂದ್ರ ಸರ್ಕಾರದ ಗ್ಯಾಸ್, ಪೆಟ್ರೋಲ್ ಮತ್ತು ಡಿಸೈಲ್ ಬೆಲೆ ಏರಿಕೆಯನ್ನು ಖಂಡಿಸಿ ಕಾಮಾಕ್ಷಿಪುರಂ ಬಡಾವಣೆ ಮತ್ತು ಸಾರ್ವಜನಿಕ ಸ್ಥಳಗಳ ಹೊರಗೆ ಗ್ಯಾಸ್ ಸಿಲಿಂಡರ್, ಸ್ಕೂಟರ್/ಬೈಕ್, ಮತ್ತು ಖಾಲಿ ಪೆಟ್ರೋಲ್/ಡೀಸೆಲ್ ಡಬ್ಬಗಳಿಗೆ ಹಾರ ಹಾಕಿ ಪ್ರತಿಭಟನೆ ನಡೆಸಲಾಯಿತು. ಜಿಲ್ಲಾ ಇಂಟೆಕ್ ಅಧ್ಯಕ್ಷ ಬಂಗಾರೇಶ ಹಿರೇಮಠ, ಗೋವಿಂದ ಕೊಣ್ಣೂರ, ಜೇಮ್ಸ್ ಅರ್ನಾಲ್ಡ್, ಸದಾಶಿವಯ್ಯ ಹಿರೇಮಠ ಮುಂತಾದವರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ವಿದ್ಯಾನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ ಅವರು, ಆಡಳಿತರೂಢ ಬಿಜೆಪಿ ಸರ್ಕಾರದ ದುಬಾರಿ ಆಡಳಿತದಿಂದ ಜನರು ರೋಸಿ ಹೋಗಿದ್ದು, ಜನಸಾಮಾನ್ಯರನ್ನು ಸಂಕಷ್ಟಕ್ಕೀಡು ಮಾಡುವಂತ ಕೆಲಸ ಮಾಡುತ್ತಿದೆ. ಬೆಲೆ ಏರಿಕೆಯಿಂದ ಬೆಂದು ಹೋಗಿರುವ ಜನತೆ ಬದಲಾವಣೆ ಬಯಸುತ್ತಿದೆ ಎಂದರು.

ಕೇಂದ್ರ ಸರ್ಕಾರದ ಗ್ಯಾಸ್, ಪೆಟ್ರೋಲ್ ಮತ್ತು ಡಿಸೈಲ್ ಬೆಲೆ ಏರಿಕೆ ಖಂಡಿಸಿ ವಾಯುವ್ಯ ಸಾರಿಗೆ ಸಂಸ್ಥೆಯ ಮಾಜಿ ಅಧ್ಯಕ್ಷ ಸದಾನಂದ ಡಂಗನವರ ಹುಬ್ಬಳ್ಳಿಯಲ್ಲಿಂದು ಹೂಮಾಲೆ ಹಾಕಿದ ಸಿಲಿಂಡರ್‌ನ್ನು ಗ್ರಾಹಕರಿಗೆ ನೀಡುವ ಮೂಲಕ ಪ್ರತಿಭಟನೆ ನಡೆಸಿದರು. ಶಂಕರ ಅಕ್ಕರಗಲ್ಲ, ಸಂಜೀವ ಕುಂಠೆ, ರಘುನಾಥ ಸಿಂಗ್, ಕಾಂಚನಾ ಶಿಂಧೆ, ಇರ್ಷಾ ಅಲಿ ಇನ್ನಿತರರಿದ್ದರು.

ಪ್ರತಿಭಟನೆಯಲ್ಲಿ ಪಾಲಿಕೆ ಸದಸ್ಯರಾದ ಸಂದಿಲ್‌ಕುಮಾರ, ಸುವರ್ಣ ಕಲ್ಲಕುಂಟ್ಲಾ, ಪ್ರಕಾಶ ಕುರಹಟ್ಟಿ, ಆರಿಫ್ ಭದ್ರಾಪುರ, ಮಾಜಿ ಮೇಯರ್ ಪ್ರಕಾಶ ಕ್ಯಾರಕಟ್ಟಿ, ಹೂವಪ್ಪ ದಾಯಗೋಡಿ, ಸುನೀಲ ಮಠಪತಿ, ಮಹ್ಮದಶರೀಫ್ ಗರಗದ, ಅಶೋಕ ಕಲಾದಗಿ, ಶಾಕೀರ ಸನದಿ, ಬಂಗಾರೇಶ ಹಿರೇಮಠ, ಪೀರಾಜಿ ಖಂಡೇಕರ, ವೀರಣ್ಣ ಹಿರೇಹಾಳ, ದೀಪಾ ಗೌರಿ ಸೇರಿದಂತೆ ಅನೇಕರಿದ್ದರು.

administrator

Related Articles

Leave a Reply

Your email address will not be published. Required fields are marked *