ಹುಬ್ಬಳ್ಳಿ-ಧಾರವಾಡ ಸುದ್ದಿ

ಎಎಸ್‌ಐ ಮೇಲೆ ಮಾರಣಾಂತಿಕ ಹಲ್ಲೆ

ಹುಬ್ಬಳ್ಳಿ: ಕ್ಷುಲಕ ಕಾರಣಕ್ಕೆ ಸಂಚಾರಿ ಠಾಣೆ ಎಎಸ್ ಐ ಒಬ್ಬರ ಮೇಲೆ ಪಕ್ಕದ ಮನೆಯ ವ್ಯಕ್ತಿಯೋರ್ವ ಇಟ್ಟಿಗೆಯಿಂದ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ಹಳೇಹುಬ್ಬಳ್ಳಿಯ ಸಹದೇವನಗರದಲ್ಲಿ ಇಂದು ಬೆಳಿಗ್ಗೆ ಸಂಭವಿಸಿದೆ.

ಉತ್ತರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಪ್ರಭು ಎ ಎಸ್ ಐ ಪುರಾಣಿಕಮಠ ಎಂಬ ಎಎಸ್‌ಐ ಅವರ ಮೇಲೆ ಹಲ್ಲೆ ನಡೆದಿದ್ದು, ತಲೆಯೊಡೆದು ರಕ್ತಸ್ರಾವವಾಗಿದ್ದು, ಗೋಕುಲ ರಸ್ತೆಯಲ್ಲಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿದ್ದು ಹತ್ತು ಹೊಲಿಗೆಗಳು ಬಿದ್ದಿವೆ ಎನ್ನಲಾಗಿದೆ.


ಎಎಸ್‌ಐ ಪಕ್ಕದ ಮನೆಯ ಭರತೇಶ ಎಂಬುವವರಿಂದ ಬೆಳಿಗ್ಗೆ 9.30ರ ಸುಮಾರಿಗೆ ಈ ಹಲ್ಲೆ ಕ್ಷುಲ್ಲಕ ಕಾರಣಕ್ಕೆ ನಡೆದಿದೆ.

administrator

Related Articles

Leave a Reply

Your email address will not be published. Required fields are marked *