ಹುಬ್ಬಳ್ಳಿ-ಧಾರವಾಡ ಸುದ್ದಿ

ವಿನಯ ಚುನಾವಣಾ ಪ್ರಚಾರಕ್ಕೆ ಪತ್ನಿ ಶಿವಲೀಲಾ ಚಾಲನೆ

ಧಾರವಾಡ: ತಾಲೂಕಿನ ಶಿವಳ್ಳಿ ಗ್ರಾಮದಲ್ಲಿ ದುರ್ಗಾದೇವಿಗೆ ಕಾಂಗ್ರೆಸ್ ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಮತ್ತು ಅಭಿಮಾನಿಗಳ ಸಹಿತ ಪೂಜೆ ಸಲ್ಲಿಸುವ ಮೂಲಕ ಮಾಜಿ ಸಚಿವ ವಿನಯ ಕುಲಕರ್ಣಿಯವರ ಅನುಪಸ್ಥಿತಿಯಲ್ಲೇ ಇಂದು ಚುನಾವಣಾ ಪ್ರಚಾರಕ್ಕೆ ಚಾಲನೆ ದೊರೆಯಿತು.


ಪಕ್ಷದ ಪ್ರಮುಖರ ಜೊತೆ ಸಭೆ ನಡೆಸಿದ ವಿನಯ ಕುಲಕರ್ಣಿಯವರ ಪತ್ನಿ ಶಿವಲೀಲಾ ಚಾಲನೆ ನೀಡಿ, ಗ್ರಾಮದ ಮನೆ ಮನೆಗೆ ತೆರಳಿ ವಿನಯ ಕುಲಕರ್ಣಿಯವರನ್ನು ಬೆಂಬಲಿಸುವ ಮೂಲಕ ಸಹಕಾರ ನೀಡಬೇಕು ಎಂದು ಪ್ರಾರ್ಥಿಸಿದರು.


ಈ ಸಂದರ್ಭದಲ್ಲಿ ಅವರು, ವಿನಯ ಕುಲಕರ್ಣಿಯವರ ಜನಪ್ರೀಯತೆಯನ್ನು ಸಹಿಸಲಾರದ ಕುತಂತ್ರಿಗಳು, ಷಡ್ಯಂತ್ರ ಮಾಡಿ ಅವರಿಗೆ ಧಾರವಾಡಕ್ಕೆ ಬರದ ಹಾಗೇ ನಿರಂತರ ಪ್ರಯತ್ನ ಮಾಡುತ್ತಿದ್ದು, ತಾವೆಲ್ಲಾ ಕಾರ್ಯಕರ್ತರು ಒಬ್ಬೊಬ್ಬ ಕಾರ್ಯಕರ್ತ ವಿನಯ ಕುಲಕರ್ಣಿಯಾಗಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು. ಗೆಲುವು ನಿಶ್ಚಿತವಾಗಿದ್ದು, ತಾವೆಲ್ಲ ಶ್ರಮ ವಹಿಸಿ ದುಡಿಯಬೇಕು ನೀವೆ ನಮ್ಮ ಶಕ್ತಿ ಎಂದರು.


ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಈಶ್ವರ ಶಿವಳ್ಳಿ, ಅರವಿಂದ ಏಗನಗೌಡರ ಮುಖಂಡರಾದ ಚನ್ನಬಸಪ್ಪ ಮಟ್ಡಿ, ಸಿದ್ದಣ್ಣ ಪ್ಯಾಟಿ, ಪರಮೇಶ್ವರ ಕಾಳೆ, ಅಣ್ಣಪ್ಪ ಚಿನಗುಡಿ, ಅಶೋಕ ಸೂರ್ಯವಂಶಿ, ಮಂಜುನಾಥ ಭೀಮಕ್ಕನವರ, ಶಿವಾನಂದ ಲಂಬಿ, ಸಿದ್ದು ಮುಳ್ಳೂರ, ಫಿರೋಜ ನಾಯ್ಕರ, ಶಿವಪ್ಪ ತಳವಾರ, ಶಂಕರವ್ವ ಮಲ್ಲಿಗವಾಡ, ಜಯಪ್ಪ ಮುದ್ದಿ, ಮಂಜು ಸುಳ್ಳದ ಮುಂತಾದವರು ಇದ್ದರು.

administrator

Related Articles

Leave a Reply

Your email address will not be published. Required fields are marked *