ಹುಬ್ಬಳ್ಳಿ-ಧಾರವಾಡ ಸುದ್ದಿ

ನಾಳೆ ಹುಬ್ಬಳ್ಳಿಗೆ ಡಿಕೆಶಿ

ಹುಬ್ಬಳ್ಳಿ: ಹುಬ್ಬಳ್ಳಿ- ಧಾರವಾಡ ಮಹಾನಗರಪಾಲಿಕೆ ಚುನಾವಣೆಯನ್ನು ಕಾಂಗ್ರೆಸ್ ಸಹ ತೀವ್ರ ಗಂಭೀರವಾಗಿ ಪರಿಗಣಿಸಿದ್ದು ನಾಳೆ ರಾಜ್ಯ ಅಧ್ಯಕ್ಷ ಡಿ.ಕೆ.ಶಿವಕುಮಾರ ಆಗಮಿಸಲಿದ್ದಾರೆ.
ಎರಡು ದಿನಗಳ ಕಾಲ ಹುಬ್ಬಳ್ಳಿಯಲ್ಲೇ ಇರುವ ಅವರು ಪಕ್ಷದ ಗೆಲುವಿಗೆ ಕೆಲ ವಾರ್ಡಗಳಲ್ಲಿ ಪ್ರಚಾರ ನಡೆಸಲಿದ್ದಾರೆ.
ಎಐಸಿಸಿ ವೀಕ್ಷಕರಾದ ಅಂಡಮಾನ್ ಸಂಸದ ಕುಲದೀಪ್ ರೈ ಶರ್ಮಾ ಈಗಾಗಲೇ ಆಗಮಿಸಿದ್ದು ಸ್ಥಳೀಯ ಮುಖಂಡರ ಜತೆ ಚರ್ಚೆ ನಡೆಸಿದ್ದು ಕೆಲ ಪ್ರದೇಶಗಳಲ್ಲಿ ಮನೆ ಮನೆಗೆ ತೆರಳಿ ಮತ ಯಾಚಿಸಿದ್ದಾರೆ. ಪಾಲಿಕೆ ಚುನಾವಣಾ ಸಮಿತಿ ಸಂಚಾಲಕ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಸಹ ಆಗಮಿಸಿ ಮುಂದಿನ ತಂತ್ರಗಾರಿಕೆ ಮಾಡಲಿದ್ದಾರೆ.
ಬಂಡಾಯ ಬಾವುಟ ಹಾರಿಸಿರುವ ಅಭ್ಯರ್ಥಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವ ಸಾಧ್ಯತೆಗಳಿವೆ.

administrator

Related Articles

Leave a Reply

Your email address will not be published. Required fields are marked *