ಹುಬ್ಬಳ್ಳಿ-ಧಾರವಾಡ ಸುದ್ದಿ

೨೮ಕ್ಕೆ ಬಾಬಾಗೌಡರಿಗೆ ನಮನ

ಧಾರವಾಡ: ಇತ್ತೀಚೆಗೆ ಅಗಲಿದ ಕೇಂದ್ರದ ಮಾಜಿ ಸಚಿವ ಹಾಗೂ ರೈತ ನಾಯಕ ಬಾಬಾಗೌಡ ಪಾಟೀಲ ಅವರಿಗೆ ದಿ.೨೮ ರಂದು ನುಡಿನಮನ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಹಿರಿಯ ನ್ಯಾಯವಾದಿ ಪಿ.ಎಚ್.ನೀರಲಕೇರಿ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಖಂಡ ಕರ್ನಾಟಕ ರೈತ ಸಂಘ ಹಾಗೂ ಬಾಬಾಗೌಡ ಪಾಟೀಲಾ ಅಭಿಮಾನಿ ಬಳಗದ ಆಶ್ರಯದಲ್ಲಿ ಬೆಳಗಾವಿ ರಸ್ತೆಯಲ್ಲಿರುವ ನರೇಂದ್ರ ಕ್ರಾಸ್ ಬಳಿ ಮಧ್ಯಾಹ್ನ ೨ ಗಂಟೆಗೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಅಂದಿನ ಕಾರ್ಯಕ್ರಮದಲ್ಲಿ ಮಾಜಿ ಶಾಸಕ ಬಿ.ಆರ್. ಪಾಟೀಲ, ದೇವದಾಸಿ ವಿಮೋಚನಾ ಸಂಸ್ಥೆಯ ವಿ.ಎಲ್.ಪಾಟೀಲ, ಅಖಂಡ ಕರ್ನಾಟಕ ರೈತ ಸಂಘದ ಪ್ರಮುಖರು, ಅಭಿಮಾನಿಗಳು ಭಾಗವಹಿಸಲಿದ್ದಾರೆ ಎಂದರು.
ರೈತ ಮುಖಂಡ ಶಿವಾನಂದ ಹೊಳೆಹಡಗಲಿ ಮಾತನಾಡಿ, ಕಳೆದ ನಾಲ್ಕು ದಶಕಗಳಿಂದ ಬಾಬಾಗೌಡರು ರೈತ ಪರ ಗಟ್ಟಿ ಧ್ವನಿಯಾಗಿದ್ದರು. ಅವರ ತತ್ವಗಳನ್ನು ಪಾಲಿಸುವ ಶಫಥ ಮಾಡಲಾಗುವುದು ಎಂದರು.
ಮುಖಂಡರಾದ ಕೇಶವ ಯಾದವ ಗುರುರಾಜ ಹುಣಸಿಮರದ, ಸಿದ್ದಣ್ಣ ಕಂಬಾರ,, ಉಳವಪ್ಪ ಒಡೆಯರ, ಮಲ್ಲಿಕಾರ್ಜುನ ಹಡಪದ, ಭೀಮಣ್ಣ ಕಾಸಾಯಿ ಸುದ್ದಿಗೋಷ್ಠಿಯಲ್ಲಿದ್ದರು.

administrator

Related Articles

Leave a Reply

Your email address will not be published. Required fields are marked *