ಹುಬ್ಬಳ್ಳಿ-ಧಾರವಾಡ ಸುದ್ದಿ
7 ಬಿಜೆಪಿ ಪದಾಧಿಕಾರಿಗಳ ಉಚ್ಛಾಟನೆ

7 ಬಿಜೆಪಿ ಪದಾಧಿಕಾರಿಗಳ ಉಚ್ಛಾಟನೆ

ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ವಿರುದ್ಧ ಪ್ರಚಾರ ಮಾಡುವ ಪಕ್ಷದ ಆದೇಶ ಉಲ್ಲಂಘಿಸಿರುವ 7 ಪದಾಧಿ ಕಾರಿಗಳನ್ನು 6 ವರ್ಷ ಕಾಲ ಉಚ್ಛಾಟಿಸಲಾಗಿದೆ ಎಂದು ಮಹಾನಗರ ಜಿಲ್ಲಾ ಬಿಜೆಪಿ ಅಧ್ಯಕ್ಷ ಅರವಿಂದ ಬೆಲ್ಲದ ಆದೇಶ ಹೊರಡಿಸಿದ್ದಾರೆ.


ಪಕ್ಷದ ಅಧಿಕೃತ ಅಭ್ಯರ್ಥಿಗಳ ವಿರುದ್ಧ ಸ್ಫರ್ಧಿಸಿರುವ ಬಂಡಾಯ ಅಭ್ಯರ್ಥಿಗಳ ಪರ ಪಕ್ಷದ ನಿಯಮಗಳನ್ನು ಉಲ್ಲಂಘಿಸಿದ 7 ಪದಾಧಿಕಾರಿ ಗಳನ್ನು ತಕ್ಷಣದಿಂದ ಜಾರಿಗೆ ಬರುವಂತೆ ಉಚ್ಚಾಟನೆ ಮಾಡಲಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


ಸೆಂಟ್ರಲ್ ಕ್ಷೇತ್ರದ ಸಫಾಯಿ ಕರ್ಮಚಾರಿ ಸದಸ್ಯ ಯಮನಪ್ಪ ವಂದಾಲ, ಎಸ್‌ಸಿ ಮೋರ್ಚಾ ಕಾರ್ಯದರ್ಶಿ ರಾಜು ವಂದಾಲ, ಆಶ್ರಯ ಸಮಿತಿ ಸದಸ್ಯ ಹನಮಂತ ಚಲವಾದಿ, ಬಗರ ಹುಕುಂ ಸದಸ್ಯ ರಾಮು ಯಾದಗಿರಿ, ಮಹಿಳಾ ಮೋರ್ಚಾ ಕಾರ್ಯದರ್ಶಿಗಳಾದ ಭಾರತಿ ಕಾಂಬಳೆ, ದೇವಿಕಾ ಚಲವಾದಿ ಹಾಗೂ ಕಾರ್ಯಕಾರಿಣಿ ಸದಸ್ಯ ಲಿಂಗರಾಜ ಕಲ್ಲಾಪುರ ಇವರುಗಳು ಉಚ್ಛಾಟನೆಗೊಂಡವರಾಗಿದ್ದಾರೆ.

administrator

Related Articles

Leave a Reply

Your email address will not be published. Required fields are marked *