ವೀರಶೈವ ಲಿಂಗಾಯತ ಟ್ವೀಟರ್ನಲ್ಲಿ ಆಗ್ರಹ
ಬೆಂಗಳೂರು: ರಾಜ್ಯದಲ್ಲಿ 13 ಬಿಜೆಪಿ ಹಾಲಿ ಸಂಸದರಿಗೆ ಟಿಕೆಟ್ ನಿರಾಕರಿಸುವ ಸಾಧ್ಯತೆಗಳ ಕುರಿತು ಮಾಧ್ಯಮಗಳ ವರದಿ ಬೆನ್ನಲ್ಲೇ ಧಾರವಾಡ ಲೋಕಸಭಾ ಕ್ಷೇತ್ರದ ಟಿಕೆಟ್ ಪ್ರಹ್ಲಾದ್ ಜೋಶಿ ಅವರ ಬದಲಿಗೆ ಹೊಸಬರಿಗೆ ನೀಡಬೇಕು ಎಂದು ಒತ್ತಾಯ ಕೇಳಿ ಬಂದಿದೆ.
ವೀರಶೈವ ಲಿಂಗಾಯತ ಹೆಸರಿನ ಟ್ವಿಟರ್ ಖಾತೆಯಲ್ಲಿ ಈ ಬಗ್ಗೆ ಪೋಸ್ಟ್ ಒಂದನ್ನು ಹಂಚಿಕೊಳ್ಳಲಾಗಿದೆ. ’ಧಾರವಾಡ ಲೋಕಸಭಾ ಕ್ಷೇತ್ರಕ್ಕೆ ಹೊಸ ಮುಖದ ಅವಶ್ಯಕತೆ ಇದೆ’ ಎಂದು ಅದರಲ್ಲಿ ಬರೆಯಲಾಗಿದೆ.
’ಪ್ರಹ್ಲಾದ್ ಜೋಶಿ ಅವರು 2004 ರಿಂದ 2023 ವರಗೆ ಧಾರವಾಡ ಕ್ಷೇತ್ರದಲ್ಲಿ ಆಡಳಿತ ನಡೆಸಿದ್ದಾರೆ. ಈ ಮುಂದೆ ಬರುವ 2024ರ ಲೋಕಸಭಾ ಚುನಾವಣೆಗೆ ಬಿಜೆಪಿಯಿಂದ ಹೊಸಬರಿಗೆ ಅವಕಾಶ ಮಾಡಿಕೊಡಬೇಕು’ ಎಂದು ಆಗ್ರಹಿಸಲಾಗಿದೆ.
ಚುನಾವಣೆಗೆ ಒಂದು ವರ್ಷವೇ ಕಾಣಿಸಿಕೊಂಡಿರುವ ಈ ಪೋಸ್ಟ ಮುಂದಿನ ದಿನಗಳಲ್ಲಿ ಯಾವ ತಿರುವು ಪಡೆಯುವುದೋ ಕಾದು ನೋಡಬೇಕಿದೆ.