ಹುಬ್ಬಳ್ಳಿ-ಧಾರವಾಡ ಸುದ್ದಿ
ಕೈ ಹಿಡಿದ ಜೆಡಿಎಸ್ ಕಾರ್ಯಕರ್ತರು

ಕೈ ಹಿಡಿದ ಜೆಡಿಎಸ್ ಕಾರ್ಯಕರ್ತರು

ಹುಬ್ಬಳ್ಳಿ: ನಗರದ ಮಹಾನಗರ ಜಿಲ್ಲಾ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಶನಿವಾರ ನಡೆದ ಸಹಾಯ ಹಸ್ತ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಜೆಡಿಎಸ್‌ನ ಅನೇಕ ಕಾರ್ಯಕರ್ತರು ವಿದ್ಯಾನಗರದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಜತ ಉಳ್ಳಾಗಡ್ಡಿಮಠ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆ ಗೊಂಡರು.
ಜೆಡಿಎಸ್‌ನ ಜಾಫರ್ ಕುಮಟಾ, ಸೋಮು ಹಾಲಹರವಿ, ಅಜಯ ಬೂದಿಹಾಳ, ರಾಘವೇಂದ್ರ ತಡಸ ಹಾಗೂ ಇತರರನ್ನು ಕೆಪಿಸಿಸಿ ಮಾಜಿ ಅಧ್ಯಕ್ಷ ಹಳಿಯಾಳ ಶಾಸಕ ಆರ್.ವಿ.ದೇಶಪಾಂಡೆ ಅವರು ಪಕ್ಷದ ಬಾವುಟ ನೀಡಿ ಬರಮಾಡಿಕೊಂಡರು.
ಮಾಜಿ ಸಚಿವರಾದ ಸಂತೋಷ ಲಾಡ್, ಅಜಯಕುಮಾರ ಸರನಾಯಕ, ಶಾಸಕಿ ಕುಸುಮಾವತಿ ಶಿವಳ್ಳಿ, ಉಭಯ ಜಿಲ್ಲಾ ಅಧ್ಯಕ್ಷರಾದ ಅನಿಲಕುಮಾರ ಪಾಟೀಲ, ಅಲ್ತಾಫ ಹಳ್ಳೂರ, ಮಾಜಿ ಸಂಸದ ಐ.ಜಿ.ಸನದಿ, ಇಸ್ಮಾಯಿಲ್ ತಮಟಗಾರ, ಪ್ರಕಾಶ ಹಳ್ಯಾಳ, ನವೀದ ಮುಲ್ಲಾ, ಬಸವರಾಜ ಮಲಕಾರಿ ಇನ್ನಿತರರಿದ್ದರು.

administrator

Related Articles

Leave a Reply

Your email address will not be published. Required fields are marked *