ಹುಬ್ಬಳ್ಳಿ-ಧಾರವಾಡ ಸುದ್ದಿ

ಅಖಿಲ ಕರ್ನಾಟಕ ಹೂಗಾರ ಮಹಾಸಭಾ ಪದಾಧಿಕಾರಿಗಳ ಆಯ್ಕೆ

ರಾಜ್ಯ ಘಟಕದ ಅಧ್ಯಕ್ಷರಾಗಿ ಲೋಚನೇಶ ಹೂಗಾರ, ವಿಶ್ವನಾಥ ಹೂಗಾರ ಕಾರ್ಯದರ್ಶಿ

ಬೆಂಗಳೂರು: ಬೆಂಗಳೂರಿನ ಕರ್ನಾಟಕ ರಾಜ್ಯ ಪಟ್ಟಣ ಸಹಕಾರಿ ಕೋ ಆಪ್‌ರೇಟಿವ್ ಬ್ಯಾಂಕ್ ಸಭಾಂಗಣದಲ್ಲಿ ರವಿವಾರ ಅಖಿಲ ಕರ್ನಾಟಕ ಹೂಗಾರ, ಗುರವ, ಜೀರ, ಪುಲ್ಲಾರಿ, ಪೂಜಾರ ಸೇವಾ ಮಹಾಸಭಾದ ವಿವಿಧ ಪದಾಧಿಕಾರಿಗಳನ್ನು ಆಯ್ಕೆ ಮಾಡಲಾಯಿತು.


ವಿವಿಧ ಜಿಲ್ಲೆಯ ಜಿಲ್ಲಾ ಸಮಿತಿ ಅಧ್ಯಕ್ಷರು, ಹಿರಿಯರು, ಜಿಲ್ಲಾ ಪ್ರತಿನಿಧಿಗಳ ಸಭೆಯಲ್ಲಿ ಸಂಘದ ಗೌರವ ಅಧ್ಯಕ್ಷರಾಗಿ ಹನುಮಂತಪ್ಪ ಪೂಜಾರ ಜೇವರ್ಗೀ, ರಾಜ್ಯ ಘಟಕದ ಅಧ್ಯಕ್ಷರಾಗಿ ಲೋಚನೇಶ ಹೂಗಾರ, ಕಾರ್ಯಾಧ್ಯಕ್ಷರಾಗಿ ಶಂಕರ ಹೂಗಾರ, ಪ್ರಧಾನ ಕಾರ್ಯದರ್ಶಿಯಾಗಿ ವಿಶ್ವನಾಥ ಹೂಗಾರ ದೇವರಪೂರು ಇವರನ್ನು ಆಯ್ಕೆ ಮಾಡಲಾಯಿತು.


ಇದೇ ಸಂದರ್ಭದಲ್ಲಿ ವಿವಿಧ ಜಿಲ್ಲೆಗಳ ಪ್ರತಿನಿಧಿಗಳನ್ನು ರಾಜ್ಯ ಉಪಾಧ್ಯಕ್ಷರನ್ನೂ, ಸಂಘಟನಾ ಕಾರ್ಯದರ್ಶಿಯನ್ನು ಅವಿರೋಧವಾಗಿ ಆಯ್ಕೆ ಮಾಡಿ ಹೂಗಾರ ಸಮುದಾಯದ ಸಂಘಟನೆಗೆ ಒಮ್ಮತದಿಂದ ತೀರ್ಮಾನಿಸಲಾಯಿತು.
ಮುಂಬರುವ ದಿನಗಳಲ್ಲಿ ಸರ್ಕಾರದ ಮೇಲೆ ಒತ್ತಡ ತಂದು ಶ್ರೀ ಹೂಗಾರ ಮಾದಯ್ಯನವರ ಹೆಸರಲ್ಲಿ ಜಯಂತಿ ಆಚರಣೆ, ಅಭಿವೃದ್ಧಿ ನಿಗಮ ಸೇರಿದಂತೆ ವಿವಿಧ ಬೇಡಿಕೆ ಈಡೇರಿಸಲು ಸಂಘಟಿತ ಹೋರಾಟ ರೂಪಿಸಲು ನಿರ್ಧರಿಸಲಾಯಿತು.


ಹಿರಿಯ ಮುಖಂಡರಾದ ಎಚ್.ಬಿ.ಹೂಗಾರ ಬೆಳಗಾವಿ, ಬಿ.ಎಂ.ಹೂಗಾರ, ಮಾಜಿ ಅಧ್ಯಕ್ಷ ಅರವಿಂದ ಹೂಗಾರ, ಸುಭಾಷ ಹೂಗಾರ ಬಾಗಲಕೋಟೆ, ರಾಯಚೂರು ಜಿಲ್ಲಾಧ್ಯಕ್ಷ ಈರಣ್ಣ ಹೂಗಾರ, ಕಾರ್ಯಾಧ್ಯಕ್ಷ ಮಲ್ಲಿಕಾರ್ಜುನ ಶಿರವಾರ, ರಾಜ್ಯ ಸಮಿತಿ ಸದಸ್ಯ ಲಿಂಗರಾಜ್ ಹೂಗಾರ, ಅರುಣ ಪೂಜಾರಿ, ನಾಗರಾಜ ಸಂಗಳಕರ, ರಮೇಶ ಹೂಗಾರ ಕೊಪ್ಪಳ ಸೇರಿದಂತೆ ಬೆಳಗಾವಿ, ಚಿಕ್ಕೋಡಿ, ಅಥಣಿ, ಧಾರವಾಡ, ಗದಗ, ಗುಲಬುರ್ಗಾ, ಬಳ್ಳಾರಿ, ವಿಜಯಪುರ ಜಿಲ್ಲೆಯ ಸಂಘದ ಜಿಲ್ಲಾಧ್ಯಕ್ಷರು,ರಾಜ್ಯ ಸಮಿತಿಗೆ ಆಯ್ಕೆಯಾದವರು ಸಭೆಯಲ್ಲಿದ್ದರು.

administrator

Related Articles

Leave a Reply

Your email address will not be published. Required fields are marked *