ಹುಬ್ಬಳ್ಳಿ-ಧಾರವಾಡ ಸುದ್ದಿ

ಭೀಕರ ಅಪಘಾತ: ಯುವಕರಿಬ್ಬರ ದಾರುಣ ಸಾವು ಪ್ರೆಸಿಡೆಂಟ್ ಹೊಟೆಲ್ ಬಳಿ ಅವಘಡ

ಹುಬ್ಬಳ್ಳಿ: ಉಣಕಲ್ ಕೆರೆ ಬಳಿಯ ಪ್ರೆಸಿಡೆಂಟ್ ಹೊಟೆಲ್ ಹತ್ತಿರ ವೇಗವಾಗಿ ಹೋಗುತ್ತಿದ್ದ ಬೈಕ್‌ವೊಂದು ನಿಯಂತ್ರಣ ತಪ್ಪಿ ಬಿದ್ದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ದಾರುಣ ಘಟನೆ ಬುಧವಾರ ಮದ್ಯರಾತ್ರಿ ನಡೆದಿದೆ.
ಮದ್ಯರಾತ್ರಿ ೧ ಗಂಟೆಗೆ ಸುಮಾರಿಗೆ ವೇಗವಾಗಿ ಹೋಗುತ್ತಿರುವಾಗ ಬೈಕ್ ನಿಯಂತ್ರಣ ತಪಿ ಪಕ್ಕದ ಡಿವೈಡರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಬಿದ್ದಿದ್ದು ಸ್ಥಳದಲ್ಲಿಯೇ ತೀವ್ರವಾದ ರಕ್ತಸ್ರಾವವಾದ ಹಿನ್ನೆಲೆಯಲ್ಲಿ ಹಳೇಹುಬ್ಬಳ್ಳಿಯ ನವೀನ ಗೊಲ್ಲರ (ಹಳೇಹುಬ್ಬಳ್ಳಿ) ಮತ್ತು ಗಿರೀಶ ಕಬ್ಬಿನಕಂತಿಮಠ( ಹಾವೇರಿ) ಮೃತಪಟ್ಟಿದ್ದಾರೆ. ಇನ್ನೋರ್ವ ಯಲ್ಲಪ್ಪ ಸೋಲಾರಗೊಪ್ಪ ಎಂಬಾತ ತೀವ್ರ ಗಾಯಗೊಂಡಿದ್ದಾನೆ.
ಘಟನೆ ನಡೆಯುತ್ತಿದ್ದಂತೆಯೇ ಉತ್ತರ ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ತೆರಳಿ, ಯುವಕರನ್ನ ಕಿಮ್ಸಗೆ ರವಾನೆ ಮಾಡಲಾಗಿತ್ತಾದರೂ, ಯಾವುದೇ ಪ್ರಯೋಜನವಾಗಿಲ್ಲ. ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಇನ್ಸಪೆಕ್ಟರ್ ಶ್ರೀಕಾಂತ ತೋಟಗಿ ಹೇಳಿದ್ದಾರೆ.

administrator

Related Articles

Leave a Reply

Your email address will not be published. Required fields are marked *